<p>ದೇವನಹಳ್ಳಿ: ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಮಹತ್ವ ಸಾರಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ಗೌಡ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಅವರು ಕೇವಲ ಒಬ್ಬ ನಾಯಕನಲ್ಲ. ಅವರು ಅಪ್ರತಿಮ ಜ್ಞಾನದಾಹಿ, ಮಹಾನ್ ಚಿಂತಕ ಮತ್ತು ಸಮಾಜ ಸುಧಾರಕ. ‘ಶಿಕ್ಷಣ ಪಡೆಯಿರಿ, ಸಂಘಟಿತರಾಗಿ, ಹೋರಾಡಿ’ ಎಂಬ ಅವರ ಮಾತುಗಳು ಇಂದಿನ ಯುವಕರಿಗೂ ಮಾರ್ಗದರ್ಶನ ನೀಡುತ್ತಿವೆ ಎಂದರು.</p>.<p>ಬಡತನ ಮತ್ತು ಸಾಮಾಜಿಕ ಅಸಮಾನತೆ ನಡುವೆಯೂ ಅವರು ಕಠಿಣ ಪರಿಶ್ರಮದಿಂದ ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡಿ ದೊಡ್ಡ ಸಾಧನೆ ಮಾಡಿದರು. ಅವರ ಜೀವನ ಯುವಕರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.</p>.<p>ಭಾರತದ ಸಂವಿಧಾನವನ್ನು ರಚಿಸುವ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದ ಮಹಾನ್ ವ್ಯಕ್ತಿ ಎಂದು ಸ್ಮರಿಸಿದರು.</p>.<p>ಶೋಷಿತ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಅವರು ಹೋರಾಡಿದ ರೀತಿಯು ಎಲ್ಲರಿಗೂ ಮಾದರಿಯಾಗಿದೆ. ಮಹಿಳಾ ಹಕ್ಕುಗಳ ಪರವೂ ಅವರು ಮಹತ್ವದ ಕೆಲಸ ಮಾಡಿದ್ದಾರೆ ಎಂದು ಹೇಳಿದರು,</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಧಾ, ಕಚೇರಿ ವ್ಯವಸ್ಥಾಪಕಿ ಶರಣ್ಯ, ರಾಧಮ್ಮ, ಚೈತ್ರ, ಚಂದ್ರಪ್ಪ, ಹರೀಶ್ ಸಿಬ್ಬಂದಿ ಪ್ರಕಾಶ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-15-193648683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಮಹತ್ವ ಸಾರಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ಗೌಡ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.</p>.<p>ಅಂಬೇಡ್ಕರ್ ಅವರು ಕೇವಲ ಒಬ್ಬ ನಾಯಕನಲ್ಲ. ಅವರು ಅಪ್ರತಿಮ ಜ್ಞಾನದಾಹಿ, ಮಹಾನ್ ಚಿಂತಕ ಮತ್ತು ಸಮಾಜ ಸುಧಾರಕ. ‘ಶಿಕ್ಷಣ ಪಡೆಯಿರಿ, ಸಂಘಟಿತರಾಗಿ, ಹೋರಾಡಿ’ ಎಂಬ ಅವರ ಮಾತುಗಳು ಇಂದಿನ ಯುವಕರಿಗೂ ಮಾರ್ಗದರ್ಶನ ನೀಡುತ್ತಿವೆ ಎಂದರು.</p>.<p>ಬಡತನ ಮತ್ತು ಸಾಮಾಜಿಕ ಅಸಮಾನತೆ ನಡುವೆಯೂ ಅವರು ಕಠಿಣ ಪರಿಶ್ರಮದಿಂದ ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡಿ ದೊಡ್ಡ ಸಾಧನೆ ಮಾಡಿದರು. ಅವರ ಜೀವನ ಯುವಕರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.</p>.<p>ಭಾರತದ ಸಂವಿಧಾನವನ್ನು ರಚಿಸುವ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದ ಮಹಾನ್ ವ್ಯಕ್ತಿ ಎಂದು ಸ್ಮರಿಸಿದರು.</p>.<p>ಶೋಷಿತ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಅವರು ಹೋರಾಡಿದ ರೀತಿಯು ಎಲ್ಲರಿಗೂ ಮಾದರಿಯಾಗಿದೆ. ಮಹಿಳಾ ಹಕ್ಕುಗಳ ಪರವೂ ಅವರು ಮಹತ್ವದ ಕೆಲಸ ಮಾಡಿದ್ದಾರೆ ಎಂದು ಹೇಳಿದರು,</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಧಾ, ಕಚೇರಿ ವ್ಯವಸ್ಥಾಪಕಿ ಶರಣ್ಯ, ರಾಧಮ್ಮ, ಚೈತ್ರ, ಚಂದ್ರಪ್ಪ, ಹರೀಶ್ ಸಿಬ್ಬಂದಿ ಪ್ರಕಾಶ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-15-193648683</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>