ಹೊಸಕೋಟೆ: ಆಧುನಿಕ ಜಗತ್ತಿನ ಸ್ಪರ್ಧಾತ್ಮಕ ಯುಗದಲ್ಲಿ, ಜಾಲತಾಣಗಳ ಈ ಕಾಲದಲ್ಲಿ ರಂಗಕಲೆ, ಸಿನಿಮಾಗಳನ್ನು ಕಡೆಗಣಿಸುವ ಪರಿಸ್ಥಿತಿ ಎದುರಾಗಿದೆ. ಜನಪದ ಕಲೆಗಳನ್ನು ಮುಂದಿನ ಪೀಳಿಗೆಗಾಗಿ ಉಳಿಸಿ ಬೆಳೆಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಬೆಂಗಳೂರು ಪೂರ್ವ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಟಿ. ಮಂಜುನಾಥ್ ಅಭಿಪ್ರಾಯಪಟ್ಟರು.