<p><strong>ವಿಜಯಪುರ</strong>: ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವಂತಹ ಸಿಬ್ಬಂದಿ ಲಾಭದ ದೃಷ್ಟಿ ಹೊಂದದೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಬದ್ದತೆಯಿಂದ ಕೆಲಸ ಮಾಡಿದಾಗ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುತ್ತವೆ ಎಂದು ‘ಡೇರಿ’ ಅಧ್ಯಕ್ಷ ಗುಂಡಪ್ಪ ಹೇಳಿದರು.</p>.<p>ಸಮೀಪದ ಗಂಗವಾರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಅವರು ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.</p>.<p>‘ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಲ್ಲಿನ ರೈತರು ಹಾಗೂ ಕಬ್ಬು ಬೆಳೆಗಾರರು, ಸರ್ಕಾರವನ್ನು ಅವಲಂಬಿಸದೆ ಅಭಿವೃದ್ಧಿಯ ಮಾರ್ಗವನ್ನು ತಾವೇ ಕಂಡುಕೊಂಡಿದ್ದಾರೆ. ನಮ್ಮಲ್ಲಿ ಶೇ 80 ರಷ್ಟು ರೈತರು ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ಮಾಡುತ್ತಿದ್ದಾರೆ’ ಎಂದರು.</p>.<p>ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದೆ. ಉತ್ಪಾದನೆಯಾಗುತ್ತಿರುವ ಹಾಲು ಗುಣಮಟ್ಟದಿಂದ ಕೂಡಿದ್ದಾಗ ಮಾತ್ರವೇ ಸಂಘದ ಏಳಿಗೆ ಸಾಧ್ಯವಾಗುತ್ತದೆ ಎಂದರು.</p>.<p>ಉಪಾಧ್ಯಕ್ಷ ಮಂಜುನಾಥ್ ಮಾತನಾಡಿ, ಸಂಘಗಳ ಅಭಿವೃದ್ಧಿಗಾಗಿ ಸಹಕರಿಸುವಂತೆ ಕಾರ್ಯದರ್ಶಿಗಳು ಉತ್ಪಾದಕರನ್ನು ಪ್ರೋತ್ಸಾಹಿಸಬೇಕು. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಪ್ರವೇಶವಾಗಬಾರದು ಎಂದರು.</p>.<p>‘ತೀವ್ರ ಕುಡಿಯುವ ನೀರಿನ ಅಭಾವದ ನಡುವೆಯೂ ಹಾಲಿನ ಉತ್ಪಾದನೆಯಲ್ಲಿ ನಮ್ಮ ಉತ್ಪಾದಕರು ಹಿಂದೆ ಬಿದ್ದಿಲ್ಲ. ಬಹುತೇಕ ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಉದ್ಯಮ ಉತ್ತಮವಾಗಿ ನಡೆಯುತ್ತಿದೆ. ಮತ್ತಷ್ಟು ಪ್ರಗತಿಯತ್ತ ಉದ್ಯಮವನ್ನು ಕೊಂಡೊಯ್ಯಬೇಕಾದರೆ ಉತ್ಪಾದಕರ ಸಹಕಾರವೂ ಬಹಳಷ್ಟು ಮುಖ್ಯವಾಗುತ್ತದೆ’ ಎಂದರು.</p>.<p>ಎಪಿಎಂಸಿ ನಾಮನಿರ್ದೇಶಿತ ನಿರ್ದೇಶಕ ಜಯರಾಮೇಗೌಡ ಮಾತನಾಡಿ, ‘ರೈತರ ಬೆನ್ನೆಲುಬಾಗಿರುವ ಹೈನುಗಾರಿಕೆಯನ್ನು ಪರಿಣಾಮಕಾರಿಯಾಗಿ ಮುಂದುವರೆಸಿಕೊಂಡು ಹೋದಾಗ ಮಾತ್ರವೇ ಬರಡುನಾಡಿನಲ್ಲಿ ಬದುಕುತ್ತಿರುವ ನಾವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುವರೆಯಲಿಕ್ಕೆ ಸಾಧ್ಯವಾಗುತ್ತದೆ’ ಎಂದರು.</p>.<p>ಈ ನಿಟ್ಟಿನಲ್ಲಿ ಸಿಬ್ಬಂದಿಯಲ್ಲಿನ ಬದ್ಧತೆ, ಪ್ರಾಮಾಣಿಕತೆಯಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಸಂಘದಿಂದ ಸಿಗುವಂತಹ ಎಲ್ಲಾ ಸೌಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ಉತ್ಪಾದಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕಡೆಗೆ ಗಮನಹರಿಸಬೇಕು ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಎಂ. ರಾಜಣ್ಣ ಮಾತನಾಡಿ, ಆರ್ಥಿಕ ವ್ಯವಹಾರದಲ್ಲಿ ರೈತರ ಕಷ್ಟದ ದುಡಿಮೆಯಿಂದ ನಡೆಯುತ್ತಿರುವ ಏಕೈಕ ಸಂಸ್ಥೆ ಹಾಲು ಉತ್ಪಾದಕರ ಸಹಕಾರ ಸಂಘ, ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡದಿದ್ದಲ್ಲಿ ಭವಿಷ್ಯದಲ್ಲಿ ಸಂಘಗಳು ದಿವಾಳಿಯಾಗುವುದರ ಜತೆಗೆ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದರು.</p>.<p>ಗಂಗವಾರ, ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೇಕಾ, ಸದಸ್ಯ ಸಿ.ಎಸ್. ರಾಜಣ್ಣ, ಡೇರಿ ನಿರ್ದೇಶಕರಾದ ಬೈರೇಗೌಡ, ಈರಣ್ಣ, ಬೈರೇಗೌಡ.ಎ, ಬೈರೇಗೌಡ.ಬಿ, ನಾಗರಾಜು, ಮಂಜುನಾಥ್, ಮುನಿರಾಜು, ನಂಜಮ್ಮ, ವಸಂತ ಮುಖಂಡ ಕೃಷ್ಣಪ್ಪ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಹಾಲು ಪರಿವೀಕ್ಷಕ ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವಂತಹ ಸಿಬ್ಬಂದಿ ಲಾಭದ ದೃಷ್ಟಿ ಹೊಂದದೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಬದ್ದತೆಯಿಂದ ಕೆಲಸ ಮಾಡಿದಾಗ ಮಾತ್ರ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುತ್ತವೆ ಎಂದು ‘ಡೇರಿ’ ಅಧ್ಯಕ್ಷ ಗುಂಡಪ್ಪ ಹೇಳಿದರು.</p>.<p>ಸಮೀಪದ ಗಂಗವಾರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಅವರು ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.</p>.<p>‘ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಅಲ್ಲಿನ ರೈತರು ಹಾಗೂ ಕಬ್ಬು ಬೆಳೆಗಾರರು, ಸರ್ಕಾರವನ್ನು ಅವಲಂಬಿಸದೆ ಅಭಿವೃದ್ಧಿಯ ಮಾರ್ಗವನ್ನು ತಾವೇ ಕಂಡುಕೊಂಡಿದ್ದಾರೆ. ನಮ್ಮಲ್ಲಿ ಶೇ 80 ರಷ್ಟು ರೈತರು ಹೈನುಗಾರಿಕೆಯನ್ನೇ ನಂಬಿಕೊಂಡು ಜೀವನ ಮಾಡುತ್ತಿದ್ದಾರೆ’ ಎಂದರು.</p>.<p>ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದೆ. ಉತ್ಪಾದನೆಯಾಗುತ್ತಿರುವ ಹಾಲು ಗುಣಮಟ್ಟದಿಂದ ಕೂಡಿದ್ದಾಗ ಮಾತ್ರವೇ ಸಂಘದ ಏಳಿಗೆ ಸಾಧ್ಯವಾಗುತ್ತದೆ ಎಂದರು.</p>.<p>ಉಪಾಧ್ಯಕ್ಷ ಮಂಜುನಾಥ್ ಮಾತನಾಡಿ, ಸಂಘಗಳ ಅಭಿವೃದ್ಧಿಗಾಗಿ ಸಹಕರಿಸುವಂತೆ ಕಾರ್ಯದರ್ಶಿಗಳು ಉತ್ಪಾದಕರನ್ನು ಪ್ರೋತ್ಸಾಹಿಸಬೇಕು. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಪ್ರವೇಶವಾಗಬಾರದು ಎಂದರು.</p>.<p>‘ತೀವ್ರ ಕುಡಿಯುವ ನೀರಿನ ಅಭಾವದ ನಡುವೆಯೂ ಹಾಲಿನ ಉತ್ಪಾದನೆಯಲ್ಲಿ ನಮ್ಮ ಉತ್ಪಾದಕರು ಹಿಂದೆ ಬಿದ್ದಿಲ್ಲ. ಬಹುತೇಕ ಮಹಿಳೆಯರು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಉದ್ಯಮ ಉತ್ತಮವಾಗಿ ನಡೆಯುತ್ತಿದೆ. ಮತ್ತಷ್ಟು ಪ್ರಗತಿಯತ್ತ ಉದ್ಯಮವನ್ನು ಕೊಂಡೊಯ್ಯಬೇಕಾದರೆ ಉತ್ಪಾದಕರ ಸಹಕಾರವೂ ಬಹಳಷ್ಟು ಮುಖ್ಯವಾಗುತ್ತದೆ’ ಎಂದರು.</p>.<p>ಎಪಿಎಂಸಿ ನಾಮನಿರ್ದೇಶಿತ ನಿರ್ದೇಶಕ ಜಯರಾಮೇಗೌಡ ಮಾತನಾಡಿ, ‘ರೈತರ ಬೆನ್ನೆಲುಬಾಗಿರುವ ಹೈನುಗಾರಿಕೆಯನ್ನು ಪರಿಣಾಮಕಾರಿಯಾಗಿ ಮುಂದುವರೆಸಿಕೊಂಡು ಹೋದಾಗ ಮಾತ್ರವೇ ಬರಡುನಾಡಿನಲ್ಲಿ ಬದುಕುತ್ತಿರುವ ನಾವು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುವರೆಯಲಿಕ್ಕೆ ಸಾಧ್ಯವಾಗುತ್ತದೆ’ ಎಂದರು.</p>.<p>ಈ ನಿಟ್ಟಿನಲ್ಲಿ ಸಿಬ್ಬಂದಿಯಲ್ಲಿನ ಬದ್ಧತೆ, ಪ್ರಾಮಾಣಿಕತೆಯಿಂದ ಮಾತ್ರ ಇದು ಸಾಧ್ಯವಾಗುತ್ತದೆ. ಸಂಘದಿಂದ ಸಿಗುವಂತಹ ಎಲ್ಲಾ ಸೌಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು. ಉತ್ಪಾದಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕಡೆಗೆ ಗಮನಹರಿಸಬೇಕು ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಎಂ. ರಾಜಣ್ಣ ಮಾತನಾಡಿ, ಆರ್ಥಿಕ ವ್ಯವಹಾರದಲ್ಲಿ ರೈತರ ಕಷ್ಟದ ದುಡಿಮೆಯಿಂದ ನಡೆಯುತ್ತಿರುವ ಏಕೈಕ ಸಂಸ್ಥೆ ಹಾಲು ಉತ್ಪಾದಕರ ಸಹಕಾರ ಸಂಘ, ಉತ್ತಮ ಗುಣಮಟ್ಟದ ಹಾಲು ಪೂರೈಕೆ ಮಾಡದಿದ್ದಲ್ಲಿ ಭವಿಷ್ಯದಲ್ಲಿ ಸಂಘಗಳು ದಿವಾಳಿಯಾಗುವುದರ ಜತೆಗೆ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಎಂದರು.</p>.<p>ಗಂಗವಾರ, ಚೌಡಪ್ಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮನೇಕಾ, ಸದಸ್ಯ ಸಿ.ಎಸ್. ರಾಜಣ್ಣ, ಡೇರಿ ನಿರ್ದೇಶಕರಾದ ಬೈರೇಗೌಡ, ಈರಣ್ಣ, ಬೈರೇಗೌಡ.ಎ, ಬೈರೇಗೌಡ.ಬಿ, ನಾಗರಾಜು, ಮಂಜುನಾಥ್, ಮುನಿರಾಜು, ನಂಜಮ್ಮ, ವಸಂತ ಮುಖಂಡ ಕೃಷ್ಣಪ್ಪ, ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಹಾಲು ಪರಿವೀಕ್ಷಕ ಶಿವಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>