ಅಭ್ಯರ್ಥಿ ಪರ ಇಲ್ಲಿ ಮತಯಾಚನೆ ಮಾಡಿದ ಅವರು, ಬೇಟಿ ಬಚಾವೋ..ಬೇಟಿ ಪಡಾವೋ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಪ್ರತಿಯೊಬ್ಬ ಹೆಣ್ಣು ಮಗಳು, ಕಟ್ಟಿಗೆಯಿಂದ ಅಡುಗೆ ತಯಾರಿಸುವಾಗ ಹೊಗೆಯಿಂದ ಆರೋಗ್ಯಕ್ಕೆ ಹಾನಿಯಾಗಬಾರದೆಂದು ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕಗಳನ್ನು ನೀಡಿದ್ದಾರೆ. ಇದರ ಜೊತೆಗೆ ಅನೇಕ ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.