ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರಹಡಪದ್ ಮಾತನಾಡಿ, ರಾಮಾಯಣದಲ್ಲಿ ರಾಜನೀತಿ, ಮಾನವೀಯ ಮೌಲ್ಯ, ಸಮಾಜ ಸುಧಾರಣೆ, ಶಿಕ್ಷಣ, ಅಹಿಂಸೆ ಪ್ರತಿಪಾದನೆ, ಸಹನೆ, ಸಮಾನತೆ, ಪ್ರಾಮಾಣಿಕತೆ ತತ್ವ ಕಾಣಬಹುದು. ಇವುಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಉತ್ತಮ ಜೀವನ ನಡೆಸಬಹುದು. ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ. ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಪ್ರತಿಯೊಬ್ಬರು ತಿಳಿದುಕೊಳ್ಳುವುದು ಅಗತ್ಯ ಎಂದು ತಿಳಿಸಿದರು.