ದೇವನಹಳ್ಳಿ: ಬಿದಲೂರು ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಪ್ರತಿಷ್ಠಾಪನೆ ಎರಡು ಸಮುದಾಯದ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಗ್ರಾಮದಲ್ಲಿ ಸೋಮವಾರ ಸಂಜೆ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ವಾಲ್ಮೀಕಿ ಯುವಕ ಸಂಘದ ಪದಾಧಿಕಾರಿಗಳು ಪ್ರತಿಷ್ಠಾಪನೆ ಮಾಡಿದ್ದರು. ಆದರೆ, ಪೊಲೀಸರು, ಗ್ರಾ.ಪಂ, ತಾ.ಪಂ ಅಧಿಕಾರಿಗಳು ಪೂಜೆಗೆ ಅವಕಾಶ ನೀಡುತ್ತಿಲ್ಲ ಎಂಬುದು ಸ್ಥಳೀಯ ವಾಲ್ಮೀಕಿ ಸಮುದಾಯದ ಯುವಕರ ಆರೋಪವಾಗಿದೆ.