ಶುಕ್ರವಾರದಿಂದಲೇ ದೇವಾಲಯಗಳನ್ನು ಸ್ವಚ್ಛಗೊಳಿಸಿದ್ದ ಭಕ್ತರು, ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಿ, ಮಾವಿನ ಎಲೆಗಳು, ಬೇವಿನ ಹೂಗಳಿಂದ ತೋರಣಗಳನ್ನು ಕಟ್ಟಿ ಪೂಜೆ ಸಲ್ಲಿಸಿದರು. ದೇವರ ಮೂರ್ತಿಗಳಿಗೆ ಹೂವಿನ ವಿಶೇಷ ಅಲಂಕಾರ ಮಾಡಿ, ದೇವಾಲಯಗಳಿಗೆ ಬಂದಿದ್ದ ಭಕ್ತರಿಗೆ ಕೋಸಂಬರಿ, ಪಾನಕ, ಮಜ್ಜಿಗೆಗಳನ್ನು ವಿತರಣೆ ಮಾಡಿದರು.