ಕೊರೊನಾ ಸಂದರ್ಭದಲ್ಲಿ ಆಹಾರದ ಕಿಟ್ಗಳನ್ನು ನೀಡುವ ಮೂಲಕ ಸಂಕಷ್ಟದಲ್ಲಿರುವವರಿಗೆ ನೆರವಾಗಬೇಕೆಂಬ ಉದ್ದೇಶದಿಂದ ಈ ಕಾರ್ಯ ಕೈಗೊಳ್ಳಲಾಗಿದೆ. ಆಶ್ರಮದೊಂದಿಗೆ ಇನ್ಫೊಸಿಸ್ ಪ್ರತಿಷ್ಠಾನ ಕೈಜೋಡಿಸಿರುವುದರಿಂದ ಹೆಚ್ಚು ಜನರಿಗೆ ಸೌಲಭ್ಯ ನೀಡಲು ಸಾಧ್ಯವಾಗಿದೆ. ಅರ್ಹರನ್ನು ಗುರುತಿಸುವ ನಿಟ್ಟಿನಲ್ಲಿ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಗುರುತಿಸಿದ್ದಾರೆ. ಡಿವೈಎಸ್ಪಿ ಡಾ.ಎಚ್.ಎಂ.ಮಹದೇವಪ್ಪ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ, ಜಿಗಣಿ, ಚಂದಾಪುರ, ಅತ್ತಿಬೆಲೆಗಳಲ್ಲಿ ಪೊಲೀಸರ ಸಹಕಾರದಿಂದ ಕಿಟ್ಗಳನ್ನು ವಿತರಿಸಲಾಗಿದೆ ಎಂದರು.