ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾ ಪರಿಕರ ವಿತರಣೆ

Last Updated 26 ನವೆಂಬರ್ 2020, 5:13 IST
ಅಕ್ಷರ ಗಾತ್ರ

ದೇವನಹಳ್ಳಿ: ಕೊರೊನಾ ಸೋಂಕಿನ ಭೀತಿಯಿಂದಾಗಿ ಸರ್ಕಾರ ಶಾಲಾ, ಕಾಲೇಜು ಆರಂಭಿಸಲು ತಾತ್ಕಾಲಿಕವಾಗಿ ಮುಂದೂಡಿದ್ದು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಉತ್ತಮ ಅವಕಾಶವಿದೆ ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷ ಕೆ.ಸಿ. ಮಂಜುನಾಥ್ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಭವನದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಬಚ್ಚಹಳ್ಳಿಯ ಸರ್ಕಾರಿ ಶಾಲೆಗೆ ಕ್ರೀಡಾ ಪರಿಕರ ಪಡೆದು ಮಾತನಾಡಿದರು.

ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಗಿಸಿಬೇಕಾದ ಮಕ್ಕಳನ್ನು ಇಡೀ ವರ್ಷ ಮನೆಯಲ್ಲಿ ಬಂದಿಯಾಗಿಸಿದರೆ ದೈಹಿಕ ಸಾಮರ್ಥ್ಯದ ಜತೆಗೆ ಮಾನಸಿಕ ಬೆಳವಣಿಗೆ ಕಷ್ಟಕರವಾಗಲಿದೆ ಎಂದರು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT