<p><strong>ದೇವನಹಳ್ಳಿ:</strong>ಬೆಂಗಳೂರುಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರಿಗೆ ಕೊರೊನಾ ಸೋಂಕು ಕಂಡು ಬಂದಿದ್ದು ಜಿಲ್ಲಾಡಳಿತ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಮಾರ್ಚ್ 15 ರಿಂದ ಕೊರೊನ ಸೋಂಕು ತಡೆಗಟ್ಟಲು ವಿಮಾನ ನಿಲ್ದಾಣಕ್ಕೆ ಬರುವ ಅನಿವಾಸಿ ಭಾರತೀಯರು ಹಾಗೂ ಇತರರನ್ನು ತಪಾಸಣೆ ನಡೆಸಿ ದೇವನಹಳ್ಳಿಯ ಆಕಾಶ್ ವೈದ್ಯಕೀಯ ಕಾಲೇಜಿನಲ್ಲಿ ಕ್ವಾರಂಟೈನ್ನಲ್ಲಿ ಇರಿಸುವ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ನಡುವೆ ಸೋಂಕು ಹರಡಿದ್ದಾದರೂ ಹೇಗೆ ಎಂಬುದು ನನಗೂ ಅರ್ಥವಾಗುತ್ತಿಲ್ಲ’ ಎಂದರು.</p>.<p>‘ಕಳೆದ ಮಂಗಳವಾರ ಜ್ವರ ಮತ್ತು ನೆಗಡಿ ಕೆಮ್ಮಿನಿಂದ ಬಳಲುತ್ತಿದ್ದೆ. ಅನುಮಾನದ ಮೇರೆಗೆ ಪರೀಕ್ಷಿಸಿದಾಗ ಸೋಂಕು ಇರುವುದು ಖಚಿತಪಟ್ಟಿದೆ. ಪ್ರಸ್ತುತ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಆಸ್ಪತ್ರೆಗೆ ದಾಖಲಾಗುವ ಚಿಂತನೆ ಇದೆ’ ಎಂದು ಹೇಳಿದರು.</p>.<p>‘ಜಿಲ್ಲಾಧಿಕಾರಿ ಕಚೇರಿಗೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗಿದೆ’ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಜಿಲ್ಲಾಡಳಿತ ಕಚೇರಿಯಲ್ಲಿ 600ಕ್ಕೂ ಹೆಚ್ಚು ಸಿಬ್ಬಂದಿಯಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong>ಬೆಂಗಳೂರುಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರಿಗೆ ಕೊರೊನಾ ಸೋಂಕು ಕಂಡು ಬಂದಿದ್ದು ಜಿಲ್ಲಾಡಳಿತ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ಮಾರ್ಚ್ 15 ರಿಂದ ಕೊರೊನ ಸೋಂಕು ತಡೆಗಟ್ಟಲು ವಿಮಾನ ನಿಲ್ದಾಣಕ್ಕೆ ಬರುವ ಅನಿವಾಸಿ ಭಾರತೀಯರು ಹಾಗೂ ಇತರರನ್ನು ತಪಾಸಣೆ ನಡೆಸಿ ದೇವನಹಳ್ಳಿಯ ಆಕಾಶ್ ವೈದ್ಯಕೀಯ ಕಾಲೇಜಿನಲ್ಲಿ ಕ್ವಾರಂಟೈನ್ನಲ್ಲಿ ಇರಿಸುವ ವ್ಯವಸ್ಥೆ ಮಾಡಲಾಗುತ್ತಿತ್ತು. ಈ ನಡುವೆ ಸೋಂಕು ಹರಡಿದ್ದಾದರೂ ಹೇಗೆ ಎಂಬುದು ನನಗೂ ಅರ್ಥವಾಗುತ್ತಿಲ್ಲ’ ಎಂದರು.</p>.<p>‘ಕಳೆದ ಮಂಗಳವಾರ ಜ್ವರ ಮತ್ತು ನೆಗಡಿ ಕೆಮ್ಮಿನಿಂದ ಬಳಲುತ್ತಿದ್ದೆ. ಅನುಮಾನದ ಮೇರೆಗೆ ಪರೀಕ್ಷಿಸಿದಾಗ ಸೋಂಕು ಇರುವುದು ಖಚಿತಪಟ್ಟಿದೆ. ಪ್ರಸ್ತುತ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಆಸ್ಪತ್ರೆಗೆ ದಾಖಲಾಗುವ ಚಿಂತನೆ ಇದೆ’ ಎಂದು ಹೇಳಿದರು.</p>.<p>‘ಜಿಲ್ಲಾಧಿಕಾರಿ ಕಚೇರಿಗೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗಿದೆ’ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಜಿಲ್ಲಾಡಳಿತ ಕಚೇರಿಯಲ್ಲಿ 600ಕ್ಕೂ ಹೆಚ್ಚು ಸಿಬ್ಬಂದಿಯಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>