<p><strong>ದೊಡ್ಡಬಳ್ಳಾಪುರ</strong>: ‘ನಗರಕ್ಕೆ ಜಿಲ್ಲಾಸ್ಪತ್ರೆ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ರಾಜಕೀಯವೇ ಬೇರೆ, ಅಭಿವೃದ್ಧಿಯೇ ಬೇರೆ. ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p><p>ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ತಾಲ್ಲೂಕು ಪಂಚಾಯಿತಿ ಅನಿರ್ಬಂಧಿತ ಕ್ರಿಯಾ ಯೋಜನೆಯಡಿ ಸರ್ಕಾರಿ ಪ್ರೌಢಶಾಲೆಗಳಿಗೆ ಡೆಸ್ಕ್, ಅಂಗನವಾಡಿಗಳಿಗೆ ಸಾಮಗ್ರಿ ವಿತರಿಸಿ<br>ಮಾತನಾಡಿದರು.</p><p>ದೊಡ್ಡಬಳ್ಳಾಪುರಕ್ಕೆ ಜಿಲ್ಲಾಸ್ಪತ್ರೆ ಮಂಜೂರು ಮಾಡುವಂತೆ ಈ ಹಿಂದಿನ ಶಾಸಕರು ಹಾಗೂ ಹಾಲಿ ಶಾಸಕರು ಒತ್ತಾಯ ಮಾಡಿದ್ದರು. ಈಗ ಆಸ್ಪತ್ರೆ ಮಂಜೂರಾಗಿದೆ. ಪಕ್ಷ ಬೇಧ ಮರೆತು ಅಭಿವೃದ್ಧಿ ಮಾಡಿದಾಗ ಮಾತ್ರ ರಾಜಕೀಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕರಿಗೆ ಕಿವಿ ಮಾತು ಹೇಳಿದರು. ಯಾವುದೇ ಪಕ್ಷದವರು ಬಂದರೂ ಅವರ ಕೆಲಸಗಳನ್ನು ಮಾಡಿಕೊಡಲಾಗುತ್ತಿದೆ<br>ಎಂದರು.</p><p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯಡಿ ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ಮೂಲ ಸೌಕರ್ಯಗಳಿಗೆ ಒತ್ತು ನೀಡುತ್ತಿದೆ. ತೂಬಗೆರೆ ಹೋಬಳಿಯಲ್ಲಿ 10 ಶಾಲೆಗಳು ಹಾಗೂ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಸಿಎಸ್ಆರ್ ಅನುದಾನದಲ್ಲಿ ಶಾಲೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸರ್ಕಾರ ಆರಂಭಿಸಿದೆ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ‘ನಗರಕ್ಕೆ ಜಿಲ್ಲಾಸ್ಪತ್ರೆ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ರಾಜಕೀಯವೇ ಬೇರೆ, ಅಭಿವೃದ್ಧಿಯೇ ಬೇರೆ. ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.</p><p>ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ತಾಲ್ಲೂಕು ಪಂಚಾಯಿತಿ ಅನಿರ್ಬಂಧಿತ ಕ್ರಿಯಾ ಯೋಜನೆಯಡಿ ಸರ್ಕಾರಿ ಪ್ರೌಢಶಾಲೆಗಳಿಗೆ ಡೆಸ್ಕ್, ಅಂಗನವಾಡಿಗಳಿಗೆ ಸಾಮಗ್ರಿ ವಿತರಿಸಿ<br>ಮಾತನಾಡಿದರು.</p><p>ದೊಡ್ಡಬಳ್ಳಾಪುರಕ್ಕೆ ಜಿಲ್ಲಾಸ್ಪತ್ರೆ ಮಂಜೂರು ಮಾಡುವಂತೆ ಈ ಹಿಂದಿನ ಶಾಸಕರು ಹಾಗೂ ಹಾಲಿ ಶಾಸಕರು ಒತ್ತಾಯ ಮಾಡಿದ್ದರು. ಈಗ ಆಸ್ಪತ್ರೆ ಮಂಜೂರಾಗಿದೆ. ಪಕ್ಷ ಬೇಧ ಮರೆತು ಅಭಿವೃದ್ಧಿ ಮಾಡಿದಾಗ ಮಾತ್ರ ರಾಜಕೀಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಶಾಸಕರಿಗೆ ಕಿವಿ ಮಾತು ಹೇಳಿದರು. ಯಾವುದೇ ಪಕ್ಷದವರು ಬಂದರೂ ಅವರ ಕೆಲಸಗಳನ್ನು ಮಾಡಿಕೊಡಲಾಗುತ್ತಿದೆ<br>ಎಂದರು.</p><p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯಡಿ ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ಮೂಲ ಸೌಕರ್ಯಗಳಿಗೆ ಒತ್ತು ನೀಡುತ್ತಿದೆ. ತೂಬಗೆರೆ ಹೋಬಳಿಯಲ್ಲಿ 10 ಶಾಲೆಗಳು ಹಾಗೂ ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ಸಿಎಸ್ಆರ್ ಅನುದಾನದಲ್ಲಿ ಶಾಲೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸರ್ಕಾರ ಆರಂಭಿಸಿದೆ ಎಂದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>