ಉಷ್ಣಾಂಶ ಹೆಚ್ಚಳ: ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬಿಸಿಲಿನ ದಾಹ ನೀಗಿಸಿಕೊಳ್ಳಲು ಜನರು ಎಳನೀರು, ತಂಪು ಪಾನಿಯ, ಕಲ್ಲಂಗಡಿ, ಐಸ್ಕ್ರೀಮ್ ಮೊರೆ ಹೋಗುತ್ತಿದ್ದಾರೆ. ಮೂಕಜೀವಿಗಳ ನೋವು ಕೇಳುವವರಿಲ್ಲ. ಪ್ರಜ್ಞಾವಂತ ನಾಗರಿಕರು ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ಕೆ ಮುಂದಾಗಬೇಕಾಗಿದೆ ಎಂದು ಅವರು ಮನವಿ ಮಾಡಿದ್ದಾರೆ.