ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಶನಿವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ₹62,47,075 ಹಣ ಸಂಗ್ರಹವಾಗಿದೆ.
ಇದರೊಂದಿಗೆ ₹66,600 ಮೌಲ್ಯದ 1 ಕೆ.ಜಿ 500 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ದೇವಾಲಯದ ಆವರಣದಲ್ಲಿ ನಡೆದ ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜು, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ಸಿಬ್ಬಂದಿ ನಂಜಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ ಹಾಗೂ ಪೊಲೀಸರು ಇದ್ದರು.