ತೂಬಗೆರೆ(ದೊಡ್ಡಬಳ್ಳಾಪುರ): ತಾಲ್ಲೂಕಿನ ಶ್ರೀನಿವಾಸಪುರ ಗ್ರಾಮದಲ್ಲಿ ಕೈ ತೊಳೆಯಲು ಹೋದ ವ್ಯಕ್ತಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದಾರೆ.
ತಮಿಳುನಾಡು ಮೂಲದ ಕಾರ್ಮಿಕ ಎಳಂದ್ ಗೋವನ್ (39) ಮೃತರು.
ಕುಂಬಳಕಾಯಿ ತುಂಬಲು ಬಂದಿದ್ದ ಆತ ಊಟ ಮಾಡಿದ ನಂತರ ಕೈ ತೊಳೆಯಲು ಕೃಷ್ಣಪ್ಪ ಎಂಬುವವರ ಜಮೀನಿನಲ್ಲಿ ನಿರ್ಮಿಸಿದ್ದ ಕೃಷಿಹೊಂಡಕ್ಕೆ ತೆರಳಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.