ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ | ಬಸ್‌ ಡಿಕ್ಕಿ: ಬೈಕ್‌ ಸವಾರ ಸಾವು

Published 18 ಜನವರಿ 2024, 14:13 IST
Last Updated 18 ಜನವರಿ 2024, 14:13 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಹಿಂದೂಪುರ–ಬೆಂಗಳೂರು ರಾಜ್ಯ ಹೆದ್ದಾರಿ ಪಾಲನಜೋಗಹಳ್ಳಿ ಕೆರೆ ಸಮೀಪ ಗುರುವಾರ ಬೆಳಿಗ್ಗೆ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕೆಳಗಿನನಾಕರಂಡಳ್ಳಿ ನಿವಾಸಿ ಪ್ರಕಾಶನಾಯ್ಕ್‌(35) ಮೃತರು. ಹಿಂದೂಪುರದಿಂದ ಬೆಂಗಳೂರು ಕಡೆಗೆ ಹೊಗುತ್ತಿದ್ದ ಖಾಸಗಿ ಬಸ್ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ದ್ವಿಚಕ್ರ ವಾಹನದಲ್ಲಿ ಪ್ರಕಾಶನಾಯ್ಕ್‌ ಅವರೊಂದಿಗೆ ಪತ್ನಿ ಮತ್ತು ಮಗು ಪ್ರಯಾಣಿಸುತ್ತಿದ್ದರು. ಪತ್ನಿಗೆ ಗಂಭೀರ ಗಾಯವಾಗಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಪಘಾತದಲ್ಲಿ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT