<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಮೂಲಕ ಹಾದು ಹೋಗಿರುವ ದಾಬಸ್ಪೇಟೆ-ಹೊಸಕೋಟೆ ರಾಷ್ಟ್ರೀಯ 648ರ ಸೋಮವಾರ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ನಾಗಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕ್ಯಾಂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಾಗಿ ಮಹಾರಾಷ್ಟ್ರದ ಕ್ಯಾಂಟರ್ ಚಾಲಕ ಸುನೀಲ್, ಸಹಾಯಕ ಲಾಲ್ ಮುನೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ದಾಬಸ್ಪೇಟೆ ಕಡೆಯಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಮಣ್ಣು ತಿಂಬಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.</p>.<p>‘ಇಲ್ಲಿ ಅಪಘಾತ ನಡೆಯುವ ಸ್ಥಳವೇ ಅಲ್ಲ. ಆದರೆ ಲಾರಿ ವಿರುದ್ಧ ದಿಕ್ಕಿನಲ್ಲಿ ಬಂದಿರುವುದೇ ಅಪಘಾತಕ್ಕೆ ಕಾರಣವಾಗಿದೆ’ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಸಿಮೆಂಟ್ ಬಲ್ಕರ್ ಪಲ್ಟಿ: </strong>ಇದೇ ರಾಷ್ಟ್ರೀಯ ಹೆದ್ದಾರಿಯ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಹೊಸಹಳ್ಳಿ ಗೇಟ್ ಸಮೀಪ ದಾಬಸ್ಪೇಟೆ ಕಡೆಗೆ ತೆರಳುತ್ತಿದ್ದ ಸಿಮೆಂಟ್ ಬಲ್ಕರ್ ಲಾರಿಯ ಟೈರ್ ಸ್ಪೋಟಗೊಂಡ ಪರಿಣಾಮ ರಸ್ತೆ ವಿಭಜಕದ ಮೇಲೆ ಸಾಗಿ ಸರ್ವೀಸ್ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ.</p>.<p>ಅದೃಷ್ಟವಶಾತ್ ಈ ಘಟನೆ ನಡೆದ ವೇಳೆ ಸರ್ವೀಸ್ ರಸ್ತೆಯಲ್ಲಿ ಯಾವುದೇ ವಾಹನಗಳು ಬರದೇ ಇದ್ದ ಕಾರಣ ದೊಡ್ಡ ಪ್ರಮಾದ ತಪ್ಪಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಮೂಲಕ ಹಾದು ಹೋಗಿರುವ ದಾಬಸ್ಪೇಟೆ-ಹೊಸಕೋಟೆ ರಾಷ್ಟ್ರೀಯ 648ರ ಸೋಮವಾರ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ನಾಗಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕ್ಯಾಂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಾಗಿ ಮಹಾರಾಷ್ಟ್ರದ ಕ್ಯಾಂಟರ್ ಚಾಲಕ ಸುನೀಲ್, ಸಹಾಯಕ ಲಾಲ್ ಮುನೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ದಾಬಸ್ಪೇಟೆ ಕಡೆಯಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ಕ್ಯಾಂಟರ್ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಮಣ್ಣು ತಿಂಬಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.</p>.<p>‘ಇಲ್ಲಿ ಅಪಘಾತ ನಡೆಯುವ ಸ್ಥಳವೇ ಅಲ್ಲ. ಆದರೆ ಲಾರಿ ವಿರುದ್ಧ ದಿಕ್ಕಿನಲ್ಲಿ ಬಂದಿರುವುದೇ ಅಪಘಾತಕ್ಕೆ ಕಾರಣವಾಗಿದೆ’ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಸಿಮೆಂಟ್ ಬಲ್ಕರ್ ಪಲ್ಟಿ: </strong>ಇದೇ ರಾಷ್ಟ್ರೀಯ ಹೆದ್ದಾರಿಯ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಹೊಸಹಳ್ಳಿ ಗೇಟ್ ಸಮೀಪ ದಾಬಸ್ಪೇಟೆ ಕಡೆಗೆ ತೆರಳುತ್ತಿದ್ದ ಸಿಮೆಂಟ್ ಬಲ್ಕರ್ ಲಾರಿಯ ಟೈರ್ ಸ್ಪೋಟಗೊಂಡ ಪರಿಣಾಮ ರಸ್ತೆ ವಿಭಜಕದ ಮೇಲೆ ಸಾಗಿ ಸರ್ವೀಸ್ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ.</p>.<p>ಅದೃಷ್ಟವಶಾತ್ ಈ ಘಟನೆ ನಡೆದ ವೇಳೆ ಸರ್ವೀಸ್ ರಸ್ತೆಯಲ್ಲಿ ಯಾವುದೇ ವಾಹನಗಳು ಬರದೇ ಇದ್ದ ಕಾರಣ ದೊಡ್ಡ ಪ್ರಮಾದ ತಪ್ಪಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>