<p>ದೊಡ್ಡಬಳ್ಳಾಪುರ: ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಜಗಜ್ಯೋತಿ ಬಸವಣ್ಣ ಜಯಂತ್ಯುತ್ಸವ ನಡೆಯಿತು.</p>.<p>ಬಸವಣ್ಣನವರ ವೈಚಾರಿಕ ನಿಲುವು ಕುರಿತು ಉಪನ್ಯಾಸ ನೀಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಬಸವಣ್ಣನವರು ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಾಯಕ, ವಿಶ್ವಗುರು ಮತ್ತು ಈ ನೆಲದ ಮೊದಲ ಸಾಮಾಜಿಕ ನ್ಯಾಯದ ಹೋರಾಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ ಎಂದು ತಿಳಿಸಿದರು.</p>.<p>ವಂಚಿತ ಸಮುದಾಯಗಳನ್ನು ತಬ್ಬಿಕೊಂಡು ನಡೆದದ್ದು ಬಸವ ಚಳುವಳಿ. ಎಲ್ಲ ಕಾಯಕಗಳಿಗೆ ವೃತ್ತಿ ಘನತೆ ತಂದು ಕೊಟ್ಟು ಅವುಗಳನ್ನು ಸತ್ಯಶುದ್ಧ ಕಾಯಕವೆಂದು ಗೌರವಿಸಿದವರು ಬಸವಣ್ಣನವರು. ಕನ್ನಡ ನೆಲದ ವೈಚಾರಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದ ನಾಯಕ ಎಂದರು.</p>.<p>ಶ್ರೀದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ತಳ ಸಮುದಾಯಗಳ ದನಿಯಾಗಿ, ಸಾಮಾಜಿಕ ಸಮಾನತೆ ಪ್ರತಿಪಾದಿಸಿದ ಬಸವಣ್ಣ ವಚನ ಮೂಲಕ ಸಮಾಜವನ್ನು ಎಚ್ಚರಿಸಿದರು. ಎಲ್ಲ ಕಾಲಕ್ಕೂ ಸಲ್ಲುವ ಮೌಲ್ಯ ಕಟ್ಟಿಕೊಟ್ಟಿದ್ದಾರೆ. ಇಂದಿಗೂ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುವುದು ವಿಷಾದನೀಯ ಎಂದರು.</p>.<p>ಪ್ರಾಂಶುಪಾಲ ಡಾ.ಪಿ.ವಿಜಯಕಾರ್ತಿಕ್, ಉಪಪ್ರಾಂಶುಪಾಲ ಡಾ.ಆರ್.ಎಂ.ಸುನಿಲ್ಕುಮಾರ್, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಡಾ.ನರಸಿಂಹರೆಡ್ಡಿ, ಡಾ.ಬಸವರಾಜ ಪಾಲ್, ಡಾ.ಪ್ರಚಲಿತ್, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ವ್ಯವಸ್ಥಾಪಕ ಎಸ್.ಯತಿನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-15-432712555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಜಗಜ್ಯೋತಿ ಬಸವಣ್ಣ ಜಯಂತ್ಯುತ್ಸವ ನಡೆಯಿತು.</p>.<p>ಬಸವಣ್ಣನವರ ವೈಚಾರಿಕ ನಿಲುವು ಕುರಿತು ಉಪನ್ಯಾಸ ನೀಡಿದ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಬಸವಣ್ಣನವರು ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಾಯಕ, ವಿಶ್ವಗುರು ಮತ್ತು ಈ ನೆಲದ ಮೊದಲ ಸಾಮಾಜಿಕ ನ್ಯಾಯದ ಹೋರಾಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ ಎಂದು ತಿಳಿಸಿದರು.</p>.<p>ವಂಚಿತ ಸಮುದಾಯಗಳನ್ನು ತಬ್ಬಿಕೊಂಡು ನಡೆದದ್ದು ಬಸವ ಚಳುವಳಿ. ಎಲ್ಲ ಕಾಯಕಗಳಿಗೆ ವೃತ್ತಿ ಘನತೆ ತಂದು ಕೊಟ್ಟು ಅವುಗಳನ್ನು ಸತ್ಯಶುದ್ಧ ಕಾಯಕವೆಂದು ಗೌರವಿಸಿದವರು ಬಸವಣ್ಣನವರು. ಕನ್ನಡ ನೆಲದ ವೈಚಾರಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದ ನಾಯಕ ಎಂದರು.</p>.<p>ಶ್ರೀದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ, ತಳ ಸಮುದಾಯಗಳ ದನಿಯಾಗಿ, ಸಾಮಾಜಿಕ ಸಮಾನತೆ ಪ್ರತಿಪಾದಿಸಿದ ಬಸವಣ್ಣ ವಚನ ಮೂಲಕ ಸಮಾಜವನ್ನು ಎಚ್ಚರಿಸಿದರು. ಎಲ್ಲ ಕಾಲಕ್ಕೂ ಸಲ್ಲುವ ಮೌಲ್ಯ ಕಟ್ಟಿಕೊಟ್ಟಿದ್ದಾರೆ. ಇಂದಿಗೂ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುವುದು ವಿಷಾದನೀಯ ಎಂದರು.</p>.<p>ಪ್ರಾಂಶುಪಾಲ ಡಾ.ಪಿ.ವಿಜಯಕಾರ್ತಿಕ್, ಉಪಪ್ರಾಂಶುಪಾಲ ಡಾ.ಆರ್.ಎಂ.ಸುನಿಲ್ಕುಮಾರ್, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಡಾ.ನರಸಿಂಹರೆಡ್ಡಿ, ಡಾ.ಬಸವರಾಜ ಪಾಲ್, ಡಾ.ಪ್ರಚಲಿತ್, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ವ್ಯವಸ್ಥಾಪಕ ಎಸ್.ಯತಿನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-15-432712555</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>