<p><strong>ದೊಡ್ಡಬಳ್ಳಾಪುರ: </strong>ನಗರದ ನ್ಯಾಯಾಲಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.</p>.<p>ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ವಿವಿಧ ರೀತಿಯ ಪ್ರಕರಣಗಳನ್ನು ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು. ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಮತ್ತು ಶೀಘ್ರವಾಗಿ ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಇರಲಿದ್ದಾರೆ ಎಂದು ತಿಳಿಸಿದರು.</p>.<p>ಲೋಕ್ ಅದಾಲತ್ ಜಿಲ್ಲೆಯ ಹಾಗೂ ಪ್ರತಿಯೊಂದು ತಾಲ್ಲೂಕಿನ ನ್ಯಾಯಾಲಯಗಳಲ್ಲಿಯೂ ನಡೆಯಲಿದೆ. ಅದಾಲತ್ನಲ್ಲಿ ಇತ್ಯರ್ಥವಾಗುವ ಪ್ರಕರಣಗಳ ಕುರಿತು ಮತ್ತೆ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದರು.</p>.<p>ಲೋಕ್ ಅದಾಲತ್ಗೆ ಸಂಬಂಧಿಸಿದಂತೆ ಯಾವುದಾದರೂ ಪ್ರಶ್ನೆಗಳಿದ್ದರೆ ಇ-ಮೈಲ್ dlsablrruralgmail.com, dlsabrdruralgmail.comಗೆ ಸಂಪರ್ಕಿಸಬಹುದು. ಸದಸ್ಯ ಕಾರ್ಯದರ್ಶಿಯ ಕಚೇರಿ ದೂ.080-22222919 ಸಹ ಸಂಪರ್ಕಿಸಬಹುದು ಎಂದು ತಿಳಿಸಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ್ ಭೀಮಸೇನ್ ಬಾಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ನಗರದ ನ್ಯಾಯಾಲಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.</p>.<p>ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ವಿವಿಧ ರೀತಿಯ ಪ್ರಕರಣಗಳನ್ನು ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು. ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಮತ್ತು ಶೀಘ್ರವಾಗಿ ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಇರಲಿದ್ದಾರೆ ಎಂದು ತಿಳಿಸಿದರು.</p>.<p>ಲೋಕ್ ಅದಾಲತ್ ಜಿಲ್ಲೆಯ ಹಾಗೂ ಪ್ರತಿಯೊಂದು ತಾಲ್ಲೂಕಿನ ನ್ಯಾಯಾಲಯಗಳಲ್ಲಿಯೂ ನಡೆಯಲಿದೆ. ಅದಾಲತ್ನಲ್ಲಿ ಇತ್ಯರ್ಥವಾಗುವ ಪ್ರಕರಣಗಳ ಕುರಿತು ಮತ್ತೆ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದರು.</p>.<p>ಲೋಕ್ ಅದಾಲತ್ಗೆ ಸಂಬಂಧಿಸಿದಂತೆ ಯಾವುದಾದರೂ ಪ್ರಶ್ನೆಗಳಿದ್ದರೆ ಇ-ಮೈಲ್ dlsablrruralgmail.com, dlsabrdruralgmail.comಗೆ ಸಂಪರ್ಕಿಸಬಹುದು. ಸದಸ್ಯ ಕಾರ್ಯದರ್ಶಿಯ ಕಚೇರಿ ದೂ.080-22222919 ಸಹ ಸಂಪರ್ಕಿಸಬಹುದು ಎಂದು ತಿಳಿಸಿದರು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ್ ಭೀಮಸೇನ್ ಬಾಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>