ದೊಡ್ಡಬಳ್ಳಾಪುರ: ನಗರದ ಪಿಎಸ್ಐ ಜಗದೀಶ್ ವೃತ್ತ ಸಮೀಪದ ಹೆದ್ದಾರಿಯ ತಿರುವಿನಲ್ಲಿ ಶನಿವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಚಾಲಕ ಸೇರಿ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತುಮಕೂರಿನ ಸೈಮನ್ ಡೇವಿಡ್(21) ಮೃತರು.
ಕಲ್ಯಾಣ ಮಂದಿರದಲ್ಲಿ ಫ್ಲವರ್ ಡೆಕೋರೆಷನ್ ಮುಗಿಸಿಕೊಂಡು ಶನಿವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಊಟ ಮಾಡುವ ಸಲುವಾಗಿ ಕಾರಿನಲ್ಲಿ ನಾಲ್ಕು ಜನ ರಾಜಾನುಕುಂಟೆಯಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಅಪಘಾತ ಸಂಭವಿಸಿದೆ.