ದೊಡ್ಡಬಳ್ಳಾಪುರ: ಮೂರು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರಾಮಾಂತರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೆಬಲ್ ಹನುಮಂತರಾಜು(50) ಅವರು ಸೋಮವಾರ ನಿಧನರಾದರು.
ಏಪ್ರಿಲ್ 11ರಂದು ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ರಾತ್ರಿ ತಾಲ್ಲೂಕಿನ ಚಿಕ್ಕಮಧುರೆ ಕೆರೆ ಏರಿ ಮೇಲೆ ಅಪಘಾತದಲ್ಲಿ ಗಾಯಗೊಂಡಿದ್ದರು.
ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಧುರೆಯಲ್ಲಿ ಸೋಮವಾರ ನಡೆಯಿತು. ಅಂತ್ಯಕ್ರಿಯೆಗು ಮುನ್ನ ನಗರದಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.