<p>ದೊಡ್ಡಬಳ್ಳಾಪುರ: ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿಯ ಎಪಿಎಂಸಿ ಮಾರುಕಟ್ಟೆ ಸಮೀಪ ಗುರುವಾರ ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಪಾಲನಜೋಗಿಹಳ್ಳಿಯ ಪುರುಷೋತ್ತಮ (29) ಮೃತರು.</p>.<p>ಗೌರಿಬಿದನೂರು ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರನ ಕೆಳಗೆ ಬಿದ್ದ ಕೂಡಲೆ ಅವೆ ಮೇಲೆ ಬಸ್ ಹರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಅಪಘಾತದಿಂದ ಕೆಲ ಸಮಯ ವಾಹನ ದಟ್ಟಣೆ ಉಂಟಾಗಿತ್ತು. ಪ್ರಾವಾಸಿ ಮಂದಿರದಿಂದ ಪಾಲನಜೋಗಿಹಳ್ಳಿಕಡೆ ಸಾಗುವ ರಾಜ್ಯ ಹೆದ್ದಾರಿಯ ಎರಡು ಬದಿಗಳಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-15-138530495</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿಯ ಎಪಿಎಂಸಿ ಮಾರುಕಟ್ಟೆ ಸಮೀಪ ಗುರುವಾರ ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಪಾಲನಜೋಗಿಹಳ್ಳಿಯ ಪುರುಷೋತ್ತಮ (29) ಮೃತರು.</p>.<p>ಗೌರಿಬಿದನೂರು ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರನ ಕೆಳಗೆ ಬಿದ್ದ ಕೂಡಲೆ ಅವೆ ಮೇಲೆ ಬಸ್ ಹರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.</p>.<p>ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಅಪಘಾತದಿಂದ ಕೆಲ ಸಮಯ ವಾಹನ ದಟ್ಟಣೆ ಉಂಟಾಗಿತ್ತು. ಪ್ರಾವಾಸಿ ಮಂದಿರದಿಂದ ಪಾಲನಜೋಗಿಹಳ್ಳಿಕಡೆ ಸಾಗುವ ರಾಜ್ಯ ಹೆದ್ದಾರಿಯ ಎರಡು ಬದಿಗಳಲ್ಲಿ ಬೇಕಾಬಿಟ್ಟಿ ವಾಹನಗಳನ್ನು ನಿಲ್ಲಿಸುತ್ತಿರುವ ಕಾರಣ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-15-138530495</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>