<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಭೂಚನಹಳ್ಳಿ ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಮಾರಾಟಕ್ಕಾಗಿ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ–ಮಗ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಮೃತರು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಪುಟ್ಟರಾಜು(55), ಕೇಶವ(18). ಮೃತದೇಹಗಳು ಇನ್ನು ಕೆರೆಯಲ್ಲಿ ನೀರಿನಲ್ಲಿ ಮುಳುಗಿದ್ದು ಪತ್ತೆಯಾಗಿಲ್ಲ.</p>.<p>ಕೆರೆಯ ಅಂಚಿನಲ್ಲಿ ಬಟ್ಟೆ, ಮೊಬೈಲ್ ಮತ್ತು ಚಪ್ಪಲಿ ಇಟ್ಟು ಕೆರೆಯಲ್ಲಿ ತಾವರೆ ಹೂವು ಕೀಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಘಟಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಮೊಬೈಲ್ ಮೂಲಕವೇ ಕುಟುಂಬಸ್ಥರನ್ನು ಸಂಪರ್ಕಿಸಿ ಮೃತರ ಬಗ್ಗೆ ಮಾಹಿತಿ ಪಡೆಯಲಾಗಿದೆ.</p>.<p>ಕತ್ತಲಾಗಿರುವ ಕಾರಣ ಮೃತ ದೇಹಗಳನ್ನು ಕೆರೆಯಲ್ಲಿ ಪತ್ತೆ ಮಾಡುವ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಗುರುವಾರ ಬೆಳಿಗ್ಗೆ ಮೃತ ದೇಹಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಭೂಚನಹಳ್ಳಿ ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಮಾರಾಟಕ್ಕಾಗಿ ಹೂ ಕೀಳಲು ಕೆರೆಗೆ ಇಳಿದಿದ್ದ ತಂದೆ–ಮಗ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಮೃತರು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿ ಪುಟ್ಟರಾಜು(55), ಕೇಶವ(18). ಮೃತದೇಹಗಳು ಇನ್ನು ಕೆರೆಯಲ್ಲಿ ನೀರಿನಲ್ಲಿ ಮುಳುಗಿದ್ದು ಪತ್ತೆಯಾಗಿಲ್ಲ.</p>.<p>ಕೆರೆಯ ಅಂಚಿನಲ್ಲಿ ಬಟ್ಟೆ, ಮೊಬೈಲ್ ಮತ್ತು ಚಪ್ಪಲಿ ಇಟ್ಟು ಕೆರೆಯಲ್ಲಿ ತಾವರೆ ಹೂವು ಕೀಳುವ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ಘಟಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಮೊಬೈಲ್ ಮೂಲಕವೇ ಕುಟುಂಬಸ್ಥರನ್ನು ಸಂಪರ್ಕಿಸಿ ಮೃತರ ಬಗ್ಗೆ ಮಾಹಿತಿ ಪಡೆಯಲಾಗಿದೆ.</p>.<p>ಕತ್ತಲಾಗಿರುವ ಕಾರಣ ಮೃತ ದೇಹಗಳನ್ನು ಕೆರೆಯಲ್ಲಿ ಪತ್ತೆ ಮಾಡುವ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಗುರುವಾರ ಬೆಳಿಗ್ಗೆ ಮೃತ ದೇಹಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>