<p><strong>ದೊಡ್ಡಬಳ್ಳಾಪುರ</strong>: ಶನೇಶ್ಚರ ಜಯಂತಿ ಅಂಗವಾಗಿ ಘಾಟಿ ಸುಬ್ರಹ್ಮಣ್ಯ ಸಮೀಪದ ಬಂಡೇಪಾಳ್ಯ ಕೆಳಗಿನ ಜೂಗಾನಹಳ್ಳಿಯಲ್ಲಿರುವ ದೇವರ ಬೆಟ್ಟದಲ್ಲಿ ವಿಶ್ವ ಶನೇಶ್ಚರಸ್ವಾಮಿ ರಥೋತ್ಸವ ಭಾನುವಾರ ಶ್ರದ್ಧಾ, ಭಕ್ತಿ ಸಂಭ್ರಮದಿಂದ ನಡೆಯಿತು. ರಥಕ್ಕೆ ಭಕ್ತರು ಬಾಳೆಹಣ್ಣು, ದವನ ಅರ್ಪಿಸಿ ಧನ್ಯತೆ ಮೆರೆದರು.</p>.<p>ರಥೋತ್ಸವ ಅಂಗವಾಗಿ ಅಂಕುರಾರ್ಪಣೆ, ಕಳಸ ಸ್ಥಾಪನೆ, ಧ್ವಜಾರೋಹಣ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಶನೇಶ್ಚರಸ್ವಾಮಿಗೆ ನಿತ್ಯ ಅಭಿಷೇಕ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯದಲ್ಲಿ ಬೆಳಗ್ಗಿನಿಂದ ಅಭಿಷೇಕ, ಅರ್ಚನೆ, ಹೋಮ ನೆರವೇರಿಸಲಾಯಿತು.</p>.<p>ಶನೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ಪಂಚ ಕಳಸದೊಂದಿಗೆ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು. ಮಧ್ಯಾಹ್ನ 2 ಗಂಟೆಗೆ ರಥೋತ್ಸವ ಜರುಗಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-15-1675643024</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ಶನೇಶ್ಚರ ಜಯಂತಿ ಅಂಗವಾಗಿ ಘಾಟಿ ಸುಬ್ರಹ್ಮಣ್ಯ ಸಮೀಪದ ಬಂಡೇಪಾಳ್ಯ ಕೆಳಗಿನ ಜೂಗಾನಹಳ್ಳಿಯಲ್ಲಿರುವ ದೇವರ ಬೆಟ್ಟದಲ್ಲಿ ವಿಶ್ವ ಶನೇಶ್ಚರಸ್ವಾಮಿ ರಥೋತ್ಸವ ಭಾನುವಾರ ಶ್ರದ್ಧಾ, ಭಕ್ತಿ ಸಂಭ್ರಮದಿಂದ ನಡೆಯಿತು. ರಥಕ್ಕೆ ಭಕ್ತರು ಬಾಳೆಹಣ್ಣು, ದವನ ಅರ್ಪಿಸಿ ಧನ್ಯತೆ ಮೆರೆದರು.</p>.<p>ರಥೋತ್ಸವ ಅಂಗವಾಗಿ ಅಂಕುರಾರ್ಪಣೆ, ಕಳಸ ಸ್ಥಾಪನೆ, ಧ್ವಜಾರೋಹಣ ನಡೆಯಿತು. ಜಾತ್ರಾ ಮಹೋತ್ಸವದ ಅಂಗವಾಗಿ ಶನೇಶ್ಚರಸ್ವಾಮಿಗೆ ನಿತ್ಯ ಅಭಿಷೇಕ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳು ನಡೆದವು. ದೇವಾಲಯದಲ್ಲಿ ಬೆಳಗ್ಗಿನಿಂದ ಅಭಿಷೇಕ, ಅರ್ಚನೆ, ಹೋಮ ನೆರವೇರಿಸಲಾಯಿತು.</p>.<p>ಶನೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ಪಂಚ ಕಳಸದೊಂದಿಗೆ ರಥದಲ್ಲಿ ಪ್ರತಿಷ್ಠಾಪಿಸಿ ಪೂಜಾ ವಿಧಿ ವಿಧಾನ ನೆರವೇರಿಸಲಾಯಿತು. ಮಧ್ಯಾಹ್ನ 2 ಗಂಟೆಗೆ ರಥೋತ್ಸವ ಜರುಗಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-15-1675643024</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>