<p><strong>ತೂಬಗೆರೆ(ದೊಡ್ಡಬಳ್ಳಾಪುರ): </strong>ಆಧುನಿಕ ಜನರ ಬದುಕು ವಿದ್ಯುತ್ ಮೇಲೆ ಸಂಪೂರ್ಣ ಅವಲಂಭಿತವಾಗಿದೆ. ದೈನಂದಿನ ಕೆಲಸಗಳಲ್ಲಿ ವಿದ್ಯುತ್ ಉಪಕರಣಗಳ ಬಳಕೆ ಹಾಗೂ ಸುರಕ್ಷಿತ ಕ್ರಮಗಳ ಪ್ರಾಥಮಿಕ ಮಾಹಿತಿಯನ್ನು ಎಲ್ಲರು ತಿಳಿದುಕೊಳ್ಳಬೇಕು ಎಂದು ಬೆಸ್ಕಾಂ ಎಂಜಿನಿಯರ್ ಹೇಮಂತ್ಲಿಂಗಪ್ಪ ಹೇಳಿದರು.</p>.<p>ತಾಲ್ಲೂಕಿನ ತೂಬಗೆರೆಯಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ನಡೆಯುತ್ತಿರುವ ವಿಶೇಷ ವಾರ್ಷಿಕ ಎನ್ಎಸ್ಎಸ್ ಶಿಬಿರದಲ್ಲಿ ವಿದ್ಯುತ್ ಸುರಕ್ಷತೆ ಕುರಿತು ಮಾತನಾಡಿದರು.</p>.<p>ವಿದ್ಯುತ್ ಅಪಘಾತಗಳು ಹೆಚ್ಚಾಗಿ ನಡೆಯುವುದೇ ಮಳೆಗಾಲದಲ್ಲಿ ಸಂದರ್ಭದಲ್ಲಿ ಸಾರ್ವಜನಿಕರು ಮಳೆ, ಗಾಳಿ ಬಂದ ಸಮಯದಲ್ಲಿ ಹೆಚ್ಚಿನ ಜಾಗೃತೆ ವಹಿಸಬೇಕು. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಅವಘಡ ಅಥವಾ ತೊಂದರೆ ಇದ್ದಾಗ ಬೆಸ್ಕಾಂ ಸಹಾಯವಾಣಿ 1912ಗೆ ಕರೆ ಮಾಡಬಹುದಾಗಿದೆ.</p>.<p>ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಅಪ್ಪು ಅಭಿಮಾನಿ ಬಳಗದ ಗಂಗಾಧರ್, ರಾಮಾಂಜನೇಯ, ಶಿಬಿರದ ಸಂಯೋಜಕ ಡಾ.ಪ್ರಕಾಶ್ಮಂಟೇದ, ಪ್ರೊ.ನೀರಜಾದೇವಿ ಇದ್ದರು. ದೇವನಹಳ್ಳಿಯ ಸಿ.ಅಶ್ವಥ್ ಕಲಾ ತಂಡದ ಸುನಿಲ್,ಮಹೇಶ್,ನಟರಾಜ್ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೂಬಗೆರೆ(ದೊಡ್ಡಬಳ್ಳಾಪುರ): </strong>ಆಧುನಿಕ ಜನರ ಬದುಕು ವಿದ್ಯುತ್ ಮೇಲೆ ಸಂಪೂರ್ಣ ಅವಲಂಭಿತವಾಗಿದೆ. ದೈನಂದಿನ ಕೆಲಸಗಳಲ್ಲಿ ವಿದ್ಯುತ್ ಉಪಕರಣಗಳ ಬಳಕೆ ಹಾಗೂ ಸುರಕ್ಷಿತ ಕ್ರಮಗಳ ಪ್ರಾಥಮಿಕ ಮಾಹಿತಿಯನ್ನು ಎಲ್ಲರು ತಿಳಿದುಕೊಳ್ಳಬೇಕು ಎಂದು ಬೆಸ್ಕಾಂ ಎಂಜಿನಿಯರ್ ಹೇಮಂತ್ಲಿಂಗಪ್ಪ ಹೇಳಿದರು.</p>.<p>ತಾಲ್ಲೂಕಿನ ತೂಬಗೆರೆಯಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ನಡೆಯುತ್ತಿರುವ ವಿಶೇಷ ವಾರ್ಷಿಕ ಎನ್ಎಸ್ಎಸ್ ಶಿಬಿರದಲ್ಲಿ ವಿದ್ಯುತ್ ಸುರಕ್ಷತೆ ಕುರಿತು ಮಾತನಾಡಿದರು.</p>.<p>ವಿದ್ಯುತ್ ಅಪಘಾತಗಳು ಹೆಚ್ಚಾಗಿ ನಡೆಯುವುದೇ ಮಳೆಗಾಲದಲ್ಲಿ ಸಂದರ್ಭದಲ್ಲಿ ಸಾರ್ವಜನಿಕರು ಮಳೆ, ಗಾಳಿ ಬಂದ ಸಮಯದಲ್ಲಿ ಹೆಚ್ಚಿನ ಜಾಗೃತೆ ವಹಿಸಬೇಕು. ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಅವಘಡ ಅಥವಾ ತೊಂದರೆ ಇದ್ದಾಗ ಬೆಸ್ಕಾಂ ಸಹಾಯವಾಣಿ 1912ಗೆ ಕರೆ ಮಾಡಬಹುದಾಗಿದೆ.</p>.<p>ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ, ಅಪ್ಪು ಅಭಿಮಾನಿ ಬಳಗದ ಗಂಗಾಧರ್, ರಾಮಾಂಜನೇಯ, ಶಿಬಿರದ ಸಂಯೋಜಕ ಡಾ.ಪ್ರಕಾಶ್ಮಂಟೇದ, ಪ್ರೊ.ನೀರಜಾದೇವಿ ಇದ್ದರು. ದೇವನಹಳ್ಳಿಯ ಸಿ.ಅಶ್ವಥ್ ಕಲಾ ತಂಡದ ಸುನಿಲ್,ಮಹೇಶ್,ನಟರಾಜ್ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>