<p><strong>ದೊಡ್ಡಬಳ್ಳಾಪುರ: </strong>ನಗರದ ಕರೇನಹಳ್ಳಿ ವಾರ್ಡ್ನಲ್ಲಿ ಸುಮಾರು 350ಕ್ಕೂ ಹೆಚ್ಚು ಮನೆಗಳಿಗೆ ಏಕಾಏಕಿ ಸಾವಿರಾರು ರೂಪಾಯಿಗಳ ವಿದ್ಯುತ್ ಶುಲ್ಕ ಹೆಚ್ಚಾಗಿದ್ದು, ಕಾರಣ ಕೇಳಿದರೆ ಲೈನ್ ಮನ್, ಬೆಸ್ಕಾಂ ಅಧಿಕಾರಿಗಳು ಉದಾಸೀನತೆಯ ಉತ್ತರ ನೀಡುತ್ತಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ಬಳಿ ಸ್ಥಳೀಯ ನಿವಾಸಿಗಳು ಆಳಲುತೋಡಿಕೊಂಡರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಬೆಸ್ಕಾಂ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರ ತಮ್ಮ ಸಮಸ್ಯೆಗಳಿಗೆ ಪ್ರಕ್ರಿಯಿಸಿದ ಶಾಸಕ ಧೀರಜ್ ಮುನಿರಾಜು ‘ಯಾವ ಕಾರಣದಿಂದಾಗಿ ಹೀಗೆ ವಿದ್ಯುತ್ ಶುಲ್ಕ ಏಕಾಏಕಿ ಹೆಚ್ಚಾಗಿ ಬಂದಿದೆ ಎನ್ನುವುದಕ್ಕೆ ಪರಿಹಾರ ಕಂಡುಹಿಡಿಯುವವರೆಗೂ ಸಾರ್ವಜನಿಕರು ಶುಲ್ಕ ಪಾವತಿಸಬಾರದು. ಈ ಬಗ್ಗೆ ಅಗತ್ಯ ಬಿದ್ದರೆ ಇಂಧನ ಸಚಿವರ ಬಳಿಯೂ ಮಾತನಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ತಾಲ್ಲೂಕಿನಾದ್ಯಂತ 70 ವರ್ಷಗಳ ಮೇಲ್ಪಟ್ಟ ವಿದ್ಯುತ್ ಲೈನ್ ಮತ್ತು ಕಂಬಗಳನ್ನು ತೆರವು ಮಾಡಿ ನೂತನ ಲೈನ್, ಕಂಬ ಅಳವಡಿಸಲು ಕಸಾಘಟ್ಟ ರೈತರು ಮನವಿ ಮಾಡಿದರು.</p>.<p>ಹೊಸದಾಗಿ ನಿರ್ಮಿಸುತ್ತಿರುವ ಮನೆಗಳಿಗೆ ನಿರಾಪೇಕ್ಷಣಾ ಪತ್ರ(ಎನ್ಒಸಿ) ಮತ್ತು ವಿದ್ಯುತ್ ಸಂಪರ್ಕ ನೀಡಲು ಅಧಿಕಾರಿಗಳು ಸುಖಾಸುಮ್ಮನೆ ಅಲೆಸುತ್ತಾರೆ ಎಂದು ನಗರ ನಿವಾಸಿಗಳು ದೂರಿದರು. ಬೈಯಪ್ಪನಹಳ್ಳಿ ಸೇರಿದಂತೆ ತಾಲ್ಲೂಕಿನಲ್ಲಿ ಕೃಷಿಗೆ ಒಂದೇ ರೀತಿಯ ವೋಲ್ಟೇಜ್ ವಿದ್ಯುತ್ ಸರಬರಾಜು ಮಾಡಲು ಮನವಿ ಮಾಡಿದರು.</p>.<p>ಬಂಕೇನಹಳ್ಳಿ ರೈತ ರವಿ ಎಂಬುವವರು ವಿದ್ಯುತ್ ಪರಿವರ್ತಕ(ಟಿಸಿ) ನೀಡುವಂತೆ ಮನವಿ ಮಾಡಿ ಹಲವು ತಿಂಗಳು ಕಳೆದರೂ ಕ್ರಮಕೈಗೊಂಡಿಲ್ಲ. ಶೀಘ್ರವಾಗಿ ಟಿಸಿ ಹಾಕಿಸುವಂತೆ ಸಭೆಯಲ್ಲಿ ಮನವಿ ಮಾಡಿದರು.</p>.<p>ಬೆಸ್ಕಾಂ ನಗರ ಉಪವಿಭಾಗದ ಕಾರ್ಯಾಪಾಲಕ ಎಂಜಿನಿಯರ್ ವಿನಯ್ಕುಮಾರ್, ಗ್ರಾಮಾಂತರ ಉಪವಿಭಾಗದ ಕಾರ್ಯಾಪಾಲಕ ಎಂಜಿನಿಯರ್ ಮಂಜುನಾಥ ಇದ್ದರು.</p>.<p><strong>ಕುಂದು ಕೊರತೆ ಸಭೆಗೆ ಬಾರದ ಜನತೆ</strong> </p><p>ಪ್ರಚಾರದ ಕೊರತೆಯಿಂದಾಗಿ ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಬೆಸ್ಕಾಂ ಇಲಾಖೆ ಆಯೋಜಿಸಿದ್ದ ಕುಂದು ಕೊರತೆ ಸಭೆಗೆ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹೊರತು ಬೆರಳೆಣಿಕೆಯಷ್ಟು ಜನ ಸಾರ್ವಜನಿಕರು ಮಾತ್ರ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ನಗರದ ಕರೇನಹಳ್ಳಿ ವಾರ್ಡ್ನಲ್ಲಿ ಸುಮಾರು 350ಕ್ಕೂ ಹೆಚ್ಚು ಮನೆಗಳಿಗೆ ಏಕಾಏಕಿ ಸಾವಿರಾರು ರೂಪಾಯಿಗಳ ವಿದ್ಯುತ್ ಶುಲ್ಕ ಹೆಚ್ಚಾಗಿದ್ದು, ಕಾರಣ ಕೇಳಿದರೆ ಲೈನ್ ಮನ್, ಬೆಸ್ಕಾಂ ಅಧಿಕಾರಿಗಳು ಉದಾಸೀನತೆಯ ಉತ್ತರ ನೀಡುತ್ತಿದ್ದಾರೆ ಎಂದು ಶಾಸಕ ಧೀರಜ್ ಮುನಿರಾಜು ಬಳಿ ಸ್ಥಳೀಯ ನಿವಾಸಿಗಳು ಆಳಲುತೋಡಿಕೊಂಡರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಬೆಸ್ಕಾಂ ಕುಂದು ಕೊರತೆ ಸಭೆಯಲ್ಲಿ ಸಾರ್ವಜನಿಕರ ತಮ್ಮ ಸಮಸ್ಯೆಗಳಿಗೆ ಪ್ರಕ್ರಿಯಿಸಿದ ಶಾಸಕ ಧೀರಜ್ ಮುನಿರಾಜು ‘ಯಾವ ಕಾರಣದಿಂದಾಗಿ ಹೀಗೆ ವಿದ್ಯುತ್ ಶುಲ್ಕ ಏಕಾಏಕಿ ಹೆಚ್ಚಾಗಿ ಬಂದಿದೆ ಎನ್ನುವುದಕ್ಕೆ ಪರಿಹಾರ ಕಂಡುಹಿಡಿಯುವವರೆಗೂ ಸಾರ್ವಜನಿಕರು ಶುಲ್ಕ ಪಾವತಿಸಬಾರದು. ಈ ಬಗ್ಗೆ ಅಗತ್ಯ ಬಿದ್ದರೆ ಇಂಧನ ಸಚಿವರ ಬಳಿಯೂ ಮಾತನಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ತಾಲ್ಲೂಕಿನಾದ್ಯಂತ 70 ವರ್ಷಗಳ ಮೇಲ್ಪಟ್ಟ ವಿದ್ಯುತ್ ಲೈನ್ ಮತ್ತು ಕಂಬಗಳನ್ನು ತೆರವು ಮಾಡಿ ನೂತನ ಲೈನ್, ಕಂಬ ಅಳವಡಿಸಲು ಕಸಾಘಟ್ಟ ರೈತರು ಮನವಿ ಮಾಡಿದರು.</p>.<p>ಹೊಸದಾಗಿ ನಿರ್ಮಿಸುತ್ತಿರುವ ಮನೆಗಳಿಗೆ ನಿರಾಪೇಕ್ಷಣಾ ಪತ್ರ(ಎನ್ಒಸಿ) ಮತ್ತು ವಿದ್ಯುತ್ ಸಂಪರ್ಕ ನೀಡಲು ಅಧಿಕಾರಿಗಳು ಸುಖಾಸುಮ್ಮನೆ ಅಲೆಸುತ್ತಾರೆ ಎಂದು ನಗರ ನಿವಾಸಿಗಳು ದೂರಿದರು. ಬೈಯಪ್ಪನಹಳ್ಳಿ ಸೇರಿದಂತೆ ತಾಲ್ಲೂಕಿನಲ್ಲಿ ಕೃಷಿಗೆ ಒಂದೇ ರೀತಿಯ ವೋಲ್ಟೇಜ್ ವಿದ್ಯುತ್ ಸರಬರಾಜು ಮಾಡಲು ಮನವಿ ಮಾಡಿದರು.</p>.<p>ಬಂಕೇನಹಳ್ಳಿ ರೈತ ರವಿ ಎಂಬುವವರು ವಿದ್ಯುತ್ ಪರಿವರ್ತಕ(ಟಿಸಿ) ನೀಡುವಂತೆ ಮನವಿ ಮಾಡಿ ಹಲವು ತಿಂಗಳು ಕಳೆದರೂ ಕ್ರಮಕೈಗೊಂಡಿಲ್ಲ. ಶೀಘ್ರವಾಗಿ ಟಿಸಿ ಹಾಕಿಸುವಂತೆ ಸಭೆಯಲ್ಲಿ ಮನವಿ ಮಾಡಿದರು.</p>.<p>ಬೆಸ್ಕಾಂ ನಗರ ಉಪವಿಭಾಗದ ಕಾರ್ಯಾಪಾಲಕ ಎಂಜಿನಿಯರ್ ವಿನಯ್ಕುಮಾರ್, ಗ್ರಾಮಾಂತರ ಉಪವಿಭಾಗದ ಕಾರ್ಯಾಪಾಲಕ ಎಂಜಿನಿಯರ್ ಮಂಜುನಾಥ ಇದ್ದರು.</p>.<p><strong>ಕುಂದು ಕೊರತೆ ಸಭೆಗೆ ಬಾರದ ಜನತೆ</strong> </p><p>ಪ್ರಚಾರದ ಕೊರತೆಯಿಂದಾಗಿ ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಬೆಸ್ಕಾಂ ಇಲಾಖೆ ಆಯೋಜಿಸಿದ್ದ ಕುಂದು ಕೊರತೆ ಸಭೆಗೆ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹೊರತು ಬೆರಳೆಣಿಕೆಯಷ್ಟು ಜನ ಸಾರ್ವಜನಿಕರು ಮಾತ್ರ ಬಂದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>