ಏ.14ರ ರಾತ್ರಿ 11.30ಕ್ಕೆ ಆಲೂರು-ದುದ್ದನಹಳ್ಳಿಯ ಅಮರ್ ತಮ್ಮ ಸ್ನೇಹಿತ ಕೋಡಿಹಳ್ಳಿಯ ನಿವಾಸಿ ಕುಮಾರ್ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸೊಣ್ಣಪ್ಪನಹಳ್ಳಿ ಗ್ರಾಮಕ್ಕೆ ತೆರಳತ್ತಿದ್ದರು. ಈ ವೇಳೆ ದಾರಿ ಮಧ್ಯ ಬೈಕ್ ತಡೆದ ಮೂವರು ಅಪರಿಚಿತರು ಮಾರಕಾಸ್ತ್ರ ತೋರಿಸಿ, ಇಬ್ಬರಿಂದ ಮೊಬೈಲ್ ಮತ್ತು ಹಣ ಕಸಿಯಲು ಯತ್ನಿಸಿದ್ದರು. ಈ ವೇಳೆ ಸಮೀಪದ ಗ್ರಾಮಸ್ಥರು ದುಷ್ಕರ್ಮಿಗಳನ್ನು ಹಿಡಿದು, ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.