<p>ದೇವನಹಳ್ಳಿ: ದೊಡ್ಡಬಳ್ಳಾಪುರದಲ್ಲಿ ಉಪವಿಭಾಗಧಿಕಾರಿಯಾಗಿದ್ದ ಸಮಯದಲ್ಲಿ ಹೈಕೋರ್ಟ್ ಮತ್ತು ಕರ್ನಾಟಕ ಮೇಲ್ಮನವಿ ಪ್ರಾಧಿಕಾರ (ಕೆಎಟಿ) ಹೆಸರಿನಲ್ಲಿ ನಕಲಿ ಆದೇಶ ಸೃಷ್ಟಿಸಿ ತಾಲ್ಲೂಕಿನ ಹಲವು ಪಹಣಿಯಲ್ಲಿ ಖಾತೆ ಬದಲಾಯಿಸಿದ್ದಾರೆ ಎಂದು ವರ್ಗಾವಣೆಗೊಂಡ ಉಪವಿಭಾಗಾಧಿಕಾರಿ ದುರ್ಗಾಶ್ರೀ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ತಾವು ಉಪವಿಭಾಗಾಧಿಕಾರಿಯಾಗಿದ್ದವೇಳೆ ಕಚೇರಿಯ ಅನಾಮಿಕರು ತಮ್ಮ ಗಮನಕ್ಕೆ ಬಾರದಂತೆ ಡಿಜಿಟಲ್ ಸಹಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ತಾವು ಉಪವಿಭಾಗಾಧಿಕಾರಿಯಾಗಿದ್ದ ವೇಳೆ ಮಾಡಲಾದ ಆದೇಶಗಳು ಸಹ ಕಚೇರಿಯಿಂದ ಕಂಪ್ಯೂಟರ್ ಮೂಲಕ ಖಾತೆ ಬದಲಾವಣೆಗೆ ಪುಶ್ ಆಗಿಲ್ಲ. ತಮ್ಮ ಡಿಜಿಟಲ್ ಕಾರ್ಡ್ ಬಳಸಿ ನಕಲಿ ಆದೇಶ ಸೃಷ್ಟಿಸಲಾಗಿದೆ ಎಂದು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.</p>.<p>ಎಫ್ಐಆರ್ನಲ್ಲಿ ಕೇಲವು ಸರ್ವೆ ನಂಬರ್ ಹಾಗೂ ಒಂದೇ ಆದೇಶವನ್ನು ಮಾತ್ರ ನಮೂದಿಸಿದ್ದಾರೆ. ‘ಪ್ರಜಾವಾಣಿ’ಗೆ ಇದೇ ರೀತಿಯ ಹೈ ಕೋರ್ಟ್ ಆದೇಶ ಮಾಡಿದೆ ಎನ್ನಲಾದ ಎಂಟಕ್ಕೂ ಹೆಚ್ಚು ಆದೇಶ ಪ್ರತಿಗಳು ದೊರೆತ್ತಿವೆ. ಈ ಆದೇಶದ ಆಧಾರದಲ್ಲಿ ಕನಿಷ್ಠ 50ಕ್ಕೂ ಹೆಚ್ಚು ಸರ್ವೆ ನಂಬರ್ ಖಾತೆಗಳು ಬದಲಾಗಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-15-239395210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವನಹಳ್ಳಿ: ದೊಡ್ಡಬಳ್ಳಾಪುರದಲ್ಲಿ ಉಪವಿಭಾಗಧಿಕಾರಿಯಾಗಿದ್ದ ಸಮಯದಲ್ಲಿ ಹೈಕೋರ್ಟ್ ಮತ್ತು ಕರ್ನಾಟಕ ಮೇಲ್ಮನವಿ ಪ್ರಾಧಿಕಾರ (ಕೆಎಟಿ) ಹೆಸರಿನಲ್ಲಿ ನಕಲಿ ಆದೇಶ ಸೃಷ್ಟಿಸಿ ತಾಲ್ಲೂಕಿನ ಹಲವು ಪಹಣಿಯಲ್ಲಿ ಖಾತೆ ಬದಲಾಯಿಸಿದ್ದಾರೆ ಎಂದು ವರ್ಗಾವಣೆಗೊಂಡ ಉಪವಿಭಾಗಾಧಿಕಾರಿ ದುರ್ಗಾಶ್ರೀ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<p>ತಾವು ಉಪವಿಭಾಗಾಧಿಕಾರಿಯಾಗಿದ್ದವೇಳೆ ಕಚೇರಿಯ ಅನಾಮಿಕರು ತಮ್ಮ ಗಮನಕ್ಕೆ ಬಾರದಂತೆ ಡಿಜಿಟಲ್ ಸಹಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ತಾವು ಉಪವಿಭಾಗಾಧಿಕಾರಿಯಾಗಿದ್ದ ವೇಳೆ ಮಾಡಲಾದ ಆದೇಶಗಳು ಸಹ ಕಚೇರಿಯಿಂದ ಕಂಪ್ಯೂಟರ್ ಮೂಲಕ ಖಾತೆ ಬದಲಾವಣೆಗೆ ಪುಶ್ ಆಗಿಲ್ಲ. ತಮ್ಮ ಡಿಜಿಟಲ್ ಕಾರ್ಡ್ ಬಳಸಿ ನಕಲಿ ಆದೇಶ ಸೃಷ್ಟಿಸಲಾಗಿದೆ ಎಂದು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.</p>.<p>ಎಫ್ಐಆರ್ನಲ್ಲಿ ಕೇಲವು ಸರ್ವೆ ನಂಬರ್ ಹಾಗೂ ಒಂದೇ ಆದೇಶವನ್ನು ಮಾತ್ರ ನಮೂದಿಸಿದ್ದಾರೆ. ‘ಪ್ರಜಾವಾಣಿ’ಗೆ ಇದೇ ರೀತಿಯ ಹೈ ಕೋರ್ಟ್ ಆದೇಶ ಮಾಡಿದೆ ಎನ್ನಲಾದ ಎಂಟಕ್ಕೂ ಹೆಚ್ಚು ಆದೇಶ ಪ್ರತಿಗಳು ದೊರೆತ್ತಿವೆ. ಈ ಆದೇಶದ ಆಧಾರದಲ್ಲಿ ಕನಿಷ್ಠ 50ಕ್ಕೂ ಹೆಚ್ಚು ಸರ್ವೆ ನಂಬರ್ ಖಾತೆಗಳು ಬದಲಾಗಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-15-239395210</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>