<p><strong>ದೊಡ್ಡಬಳ್ಳಾಪುರ:</strong> ಕೃಷಿಯೊಂದಿಗೆ ಬೆಸೆದುಕೊಂಡು ಬಂದಿರುವ ಹಬ್ಬಗಳನ್ನು ಸಾಮೂಹಿಕವಾಗಿ ಆಚರಣೆ ಮಾಡುವ ಮೂಲಕ ಕೃಷಿ ಸಂಸ್ಕೃತಿಯನ್ನು ಉಳಿಸಬೇಕಿದೆ ಎಂದು ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಂತಮ್ಮ ಹೇಳಿದರು.</p>.<p>ಅವರು ತಾಲ್ಲೂಕಿನ ಕೆಸ್ತೂರು ಗೇಟ್ನಲ್ಲಿನ ಕೃಷಿ ಕುಟೀರದಲ್ಲಿ ನಡೆದ ಸುಗ್ಗಿ ಹಬ್ಬದಲ್ಲಿ ಮಾತನಾಡಿದರು.</p>.<p>ಕೃಷಿಯಲ್ಲಿ ಆಧುನಿಕ ಯಂತ್ರಗಳ ಬಳಕೆ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳೊಂದಿಗೆ ಬೆಸೆದುಕೊಂಡರವ ಹಲವು ಆಚರಣೆಗಳು ಕಣ್ಮರೆಯಾಗುತ್ತಿವೆ. ಈ ಎಲ್ಲಾ ಚರಣೆಗಳನ್ನು ಆಚರಿಸಿಕೊಂಡು ಬರುತ್ತಿದ್ದ ಹಿರಿಯರು ಯುವ ಪಿಳಿಗೆಗೆ ಪರಿಚಯಿಸುವ ಕೆಲಸವನ್ನು ಸಂಘದಿಂದ ಮಾಡಲಾಗುತ್ತಿದೆ. ಸುಗ್ಗಿ ಹಬ್ಬದಲ್ಲಿ ಕೋಲಾಟ, ರಾಗಿ ರಾಶಿ ಪೂಜೆ, ಗೋ ಪೂಜೆ ಸೇರಿದಂತೆ ಒಕ್ಕಣೆ ಸಂದರ್ಭದಲ್ಲಿ ಕಣದಲ್ಲಿ ಆಚರಿಸುತ್ತಿದ್ದ ಎಲ್ಲಾವನ್ನು ಆಚರಿಸಲಾಗುತ್ತಿದೆ ಎಂದರು.</p>.<p>ಸಂಘದ ಮಹಿಳೆಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಂಘದ ಉಪಾಧ್ಯಕ್ಷೆ ಮಂಗಳ ರಮೇಶ್, ಕಾರ್ಯದರ್ಶಿ ಲಕ್ಷ್ಮೀ, ಸಹಕಾರ್ಯದರ್ಶಿ ಕಲ್ಪನ ಆನಂದ್, ಖಜಾಂಚಿ ರತ್ನಮ್ಮ ಅರಸೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ಕೃಷಿಯೊಂದಿಗೆ ಬೆಸೆದುಕೊಂಡು ಬಂದಿರುವ ಹಬ್ಬಗಳನ್ನು ಸಾಮೂಹಿಕವಾಗಿ ಆಚರಣೆ ಮಾಡುವ ಮೂಲಕ ಕೃಷಿ ಸಂಸ್ಕೃತಿಯನ್ನು ಉಳಿಸಬೇಕಿದೆ ಎಂದು ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ಶಾಂತಮ್ಮ ಹೇಳಿದರು.</p>.<p>ಅವರು ತಾಲ್ಲೂಕಿನ ಕೆಸ್ತೂರು ಗೇಟ್ನಲ್ಲಿನ ಕೃಷಿ ಕುಟೀರದಲ್ಲಿ ನಡೆದ ಸುಗ್ಗಿ ಹಬ್ಬದಲ್ಲಿ ಮಾತನಾಡಿದರು.</p>.<p>ಕೃಷಿಯಲ್ಲಿ ಆಧುನಿಕ ಯಂತ್ರಗಳ ಬಳಕೆ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳೊಂದಿಗೆ ಬೆಸೆದುಕೊಂಡರವ ಹಲವು ಆಚರಣೆಗಳು ಕಣ್ಮರೆಯಾಗುತ್ತಿವೆ. ಈ ಎಲ್ಲಾ ಚರಣೆಗಳನ್ನು ಆಚರಿಸಿಕೊಂಡು ಬರುತ್ತಿದ್ದ ಹಿರಿಯರು ಯುವ ಪಿಳಿಗೆಗೆ ಪರಿಚಯಿಸುವ ಕೆಲಸವನ್ನು ಸಂಘದಿಂದ ಮಾಡಲಾಗುತ್ತಿದೆ. ಸುಗ್ಗಿ ಹಬ್ಬದಲ್ಲಿ ಕೋಲಾಟ, ರಾಗಿ ರಾಶಿ ಪೂಜೆ, ಗೋ ಪೂಜೆ ಸೇರಿದಂತೆ ಒಕ್ಕಣೆ ಸಂದರ್ಭದಲ್ಲಿ ಕಣದಲ್ಲಿ ಆಚರಿಸುತ್ತಿದ್ದ ಎಲ್ಲಾವನ್ನು ಆಚರಿಸಲಾಗುತ್ತಿದೆ ಎಂದರು.</p>.<p>ಸಂಘದ ಮಹಿಳೆಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಂಘದ ಉಪಾಧ್ಯಕ್ಷೆ ಮಂಗಳ ರಮೇಶ್, ಕಾರ್ಯದರ್ಶಿ ಲಕ್ಷ್ಮೀ, ಸಹಕಾರ್ಯದರ್ಶಿ ಕಲ್ಪನ ಆನಂದ್, ಖಜಾಂಚಿ ರತ್ನಮ್ಮ ಅರಸೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>