ದೊಡ್ಡಬಳ್ಳಾಪುರ ತಾಲ್ಲೂಕಿನ ಕಂಟನಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಟೆಮ್.ಎಐ ಪ್ರಯೋಗಾಲಯವನ್ನು ಬೆಂಗಳೂರಿನ ಚೆರಿಷ್ ಟ್ರಸ್ಟ್ ಸಂಸ್ಥಾಪಕ ಮೈಖಲ್ ಡೇಸಾ ಉದ್ಘಾಟಿಸಿದರು. ಸಿಎಸ್ಆರ್ ಮುಖ್ಯಸ್ಥೆ ಸಮೀತಾ ಮನೋಹರನ್ ಇದ್ದರು.
ಸಂಶೋಧನೆಗೆ ಹೆಚ್ಚಿನ ಮಹತ್ವ
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಶೋಧನೆಗಳಿಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ಹೀಗಾಗಿ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಹೊಸ ಆವಿಷ್ಕಾರಗಳನ್ನು ಮಾಡಬೇಕು. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆರ್.ನಾರಾಯಣಸ್ವಾಮಿ ತಿಳಿಸಿದರು.