<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ನಾಯಕರಂಡನಹಳ್ಳಿ ಸಮೀಪ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ (75) , ಪುರುಷೋತ್ತಮ (62), ಕಾಳಪ್ಪ(69), ಗೋಪಿನಾಥ್ (52) ಹಾಗೂ ಕಾರು ಚಾಲಕ ನರಸಿಂಹಮೂರ್ತಿ (50) ಮೃತಪಟ್ಟವರು.</p><p>ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು. ಕಾರಿನಲ್ಲಿದ್ದ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಒಬ್ಬರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿ ಇಬ್ಬರು ಚಾಲಕರ ಸ್ಥಿತಿ ಗಂಭೀರ</strong></p><p><strong>ದೊಡ್ಡಬಳ್ಳಾಪುರ:</strong> ಇನ್ನೋವಾ ಕಾರು ಪಲ್ಟಿ ಹೊಡೆದು ಮಂಗಳವಾರ ಬೆಳಿಗ್ಗೆ ಐದು ಜನ ಮೃತಪಟ್ಟ ಗೌರಿಬಿದನೂರು ರಸ್ತೆಯಲ್ಲೇ ಲಾರಿ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ಯಾಂಟರ್ ಮತ್ತು ಲಾರಿ ಚಾಲಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕರ ಹೆಸರು, ವಿಳಾಸ ತಿಳಿದಿಲ್ಲ.</p>.<p><strong>ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆ</strong></p><p><strong>ದೊಡ್ಡಬಳ್ಳಾಪುರ:</strong> ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಶೆಟ್ಟಿಹಳ್ಳಿಯಲ್ಲಿನ ಭಾರತ್ ಪೆಟ್ರೋಲಿಯಂ ಬಂಕ್ ಸಮೀಪ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. </p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಕೆ.ಬಾಬಾ, ಡಿ.ವೈ.ಎಸ್.ಪಿ ರವಿ ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ನಾಯಕರಂಡನಹಳ್ಳಿ ಸಮೀಪ ಗೌರಿಬಿದನೂರು ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ.ಈಶ್ವರಪ್ಪ (75) , ಪುರುಷೋತ್ತಮ (62), ಕಾಳಪ್ಪ(69), ಗೋಪಿನಾಥ್ (52) ಹಾಗೂ ಕಾರು ಚಾಲಕ ನರಸಿಂಹಮೂರ್ತಿ (50) ಮೃತಪಟ್ಟವರು.</p><p>ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು. ಕಾರಿನಲ್ಲಿದ್ದ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಒಬ್ಬರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿ ಇಬ್ಬರು ಚಾಲಕರ ಸ್ಥಿತಿ ಗಂಭೀರ</strong></p><p><strong>ದೊಡ್ಡಬಳ್ಳಾಪುರ:</strong> ಇನ್ನೋವಾ ಕಾರು ಪಲ್ಟಿ ಹೊಡೆದು ಮಂಗಳವಾರ ಬೆಳಿಗ್ಗೆ ಐದು ಜನ ಮೃತಪಟ್ಟ ಗೌರಿಬಿದನೂರು ರಸ್ತೆಯಲ್ಲೇ ಲಾರಿ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ಯಾಂಟರ್ ಮತ್ತು ಲಾರಿ ಚಾಲಕರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p><p>ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕರ ಹೆಸರು, ವಿಳಾಸ ತಿಳಿದಿಲ್ಲ.</p>.<p><strong>ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆ</strong></p><p><strong>ದೊಡ್ಡಬಳ್ಳಾಪುರ:</strong> ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಶೆಟ್ಟಿಹಳ್ಳಿಯಲ್ಲಿನ ಭಾರತ್ ಪೆಟ್ರೋಲಿಯಂ ಬಂಕ್ ಸಮೀಪ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. </p><p>ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಕೆ.ಬಾಬಾ, ಡಿ.ವೈ.ಎಸ್.ಪಿ ರವಿ ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>