<p>ದೊಡ್ಡಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ನಡೆಸುತ್ತಿರುವರಿಂದರಿಂದ ಭೂ ಮಾಪನ ಇಲಾಖೆಯ ಎಲ್ಲಾ ಕೆಲಸಗಳು ಸ್ಥಗಿತಗೊಂಡಿವೆ. ಇದರಿಂದ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ.</p>.<p>ಭೂ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರೆ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿಯಾಗದೆ ಉಳಿದಿವೆ.</p>.<p>ನಗರದ ತಾಲ್ಲೂಕು ಕಚೇರಿ ಆವರಣದಲ್ಲಿರುವ ಭೂ ಮಾಪನ ಇಲಾಖೆ ಕಚೇರಿ ಮುಂದೆ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರೈತರ ಜಮೀನು ಮಾರಾಟ, ಹಕ್ಕು ಬದಲಾವಣೆ ಎಲ್ಲಾ ಕೆಲಸಗಳಿಗೂ ತೊಡಕು ಉಂಟಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಅವರನ್ನು ಕೆಲಸಕ್ಕೆ ಹಾಜರಾಗುವಂತೆ ಮಾಡಬೇಕು. ಇಲ್ಲವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಕೆಸ್ತೂರು ಗ್ರಾಮ ರೈತ ರಮೇಶ್ಗೌಡ ಆಗ್ರಹಿಸಿದರು.</p>.<p>ಎರಡು ತಿಂಗಳಿಂದ ಭೂ ಮಾಪನ ಇಲಾಖೆಯಲ್ಲಿ ಜಮೀನು ಸರ್ವೆ, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ರೈತರ ಪಾಲಿಗೆ ಈ ಇಲಾಖೆ ಸತ್ತು ಹೋಗಿದೆ. ರೈತರ ಸಮಸ್ಯೆ ಯಾರೂ ಆಲಿಸುತ್ತಿಲ್ಲ. ಸರ್ವೆ ಇಲಾಖೆ ಈ ಸಮಸ್ಯೆಯಿಂದ ಜಮೀನುಗಳ ಮಾರಾಟ ಪ್ರಕ್ರಿಯೆ ನಡೆಯುತ್ತಿಲ್ಲ. ನಮ್ಮ ತಾಲ್ಲೂಕಿನಲ್ಲಿ 2,000 ಸಾವಿರಕ್ಕೂ ಅಧಿಕ ಅರ್ಜಿಗಳ ವಿಲೇವಾರಿಯಾಗಬೇಕಿದೆ. ರೈತರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ವೆಚ್ಚ, ಮದುವೆ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ರೈತರಾದ ನಾಗರಾಜು, ಶಶಿಕುಮಾರ್, ಉಮೇಶ್, ಶಿವಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-15-970927875</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ನಡೆಸುತ್ತಿರುವರಿಂದರಿಂದ ಭೂ ಮಾಪನ ಇಲಾಖೆಯ ಎಲ್ಲಾ ಕೆಲಸಗಳು ಸ್ಥಗಿತಗೊಂಡಿವೆ. ಇದರಿಂದ ಭೂ ಮಾಪನ ಕಚೇರಿ ಸ್ತಬ್ಧವಾಗಿದೆ.</p>.<p>ಭೂ ಸರ್ವೆ, ಹದ್ದುಬಸ್ತ್, ಪೋಡಿ ಸೇರಿದಂತೆ ಇತರೆ ಕೆಲಸಗಳಿಗೆ ಸಲ್ಲಿಕೆಯಾಗಿರುವ ಎರಡು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೇವಾರಿಯಾಗದೆ ಉಳಿದಿವೆ.</p>.<p>ನಗರದ ತಾಲ್ಲೂಕು ಕಚೇರಿ ಆವರಣದಲ್ಲಿರುವ ಭೂ ಮಾಪನ ಇಲಾಖೆ ಕಚೇರಿ ಮುಂದೆ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರೈತರ ಜಮೀನು ಮಾರಾಟ, ಹಕ್ಕು ಬದಲಾವಣೆ ಎಲ್ಲಾ ಕೆಲಸಗಳಿಗೂ ತೊಡಕು ಉಂಟಾಗಿದೆ. ಸರ್ಕಾರ ಕೂಡಲೇ ಭೂ ಮಾಪಕರ ಬೇಡಿಕೆ ಈಡೇರಿಸಿ ಅವರನ್ನು ಕೆಲಸಕ್ಕೆ ಹಾಜರಾಗುವಂತೆ ಮಾಡಬೇಕು. ಇಲ್ಲವೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಕೆಸ್ತೂರು ಗ್ರಾಮ ರೈತ ರಮೇಶ್ಗೌಡ ಆಗ್ರಹಿಸಿದರು.</p>.<p>ಎರಡು ತಿಂಗಳಿಂದ ಭೂ ಮಾಪನ ಇಲಾಖೆಯಲ್ಲಿ ಜಮೀನು ಸರ್ವೆ, ಹದ್ದು ಬಸ್ತ್ , 11ಇ, ಪೋಡಿ, ದಾರಿ ನಕ್ಷೆಯ ಅರ್ಜಿಗಳು ವಿಲೇವಾರಿಯಾಗುತ್ತಿಲ್ಲ. ರೈತರ ಪಾಲಿಗೆ ಈ ಇಲಾಖೆ ಸತ್ತು ಹೋಗಿದೆ. ರೈತರ ಸಮಸ್ಯೆ ಯಾರೂ ಆಲಿಸುತ್ತಿಲ್ಲ. ಸರ್ವೆ ಇಲಾಖೆ ಈ ಸಮಸ್ಯೆಯಿಂದ ಜಮೀನುಗಳ ಮಾರಾಟ ಪ್ರಕ್ರಿಯೆ ನಡೆಯುತ್ತಿಲ್ಲ. ನಮ್ಮ ತಾಲ್ಲೂಕಿನಲ್ಲಿ 2,000 ಸಾವಿರಕ್ಕೂ ಅಧಿಕ ಅರ್ಜಿಗಳ ವಿಲೇವಾರಿಯಾಗಬೇಕಿದೆ. ರೈತರು ತಮ್ಮ ಮಕ್ಕಳ ವಿದ್ಯಾಭ್ಯಾಸ, ಆಸ್ಪತ್ರೆ ವೆಚ್ಚ, ಮದುವೆ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ ಎಂದರು.</p>.<p>ಈ ಸಂದರ್ಭದಲ್ಲಿ ರೈತರಾದ ನಾಗರಾಜು, ಶಶಿಕುಮಾರ್, ಉಮೇಶ್, ಶಿವಕುಮಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-15-970927875</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>