‘ಇಬ್ಬರು ಯುವಕರು ದೇವರ ದರ್ಶನಕ್ಕೆ ಆಗಮಿಸಿದ್ದರು. ದೇವಸ್ಥಾನದ ಆವರಣದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ, ಸಿಬ್ಬಂದಿ ಪ್ಲಾಸ್ಟಿಕ್ ಕವರ್ ಅನ್ನು ದೇವಾಲಯದ ಒಳಗೆ ತೆಗೆದುಕೊಂಡು ಹೋಗದಂತೆ ತಡೆದರು. ನಂತರ ಯುವಕರು ದೇವರಿಗೆ ಹಾಕಿ ಎಂದು ಒಳಗಡೆ ಹೂವಿನ ಹಾರದ ಮಧ್ಯೆ ಮಾಂಸ ಇಟ್ಟಿದ್ದ ಪ್ಲಾಸ್ಟಿಕ್ ಪೇಪರ್ ಕವರ್ ಅನ್ನು ದೇವಸ್ಥಾನದ ಸಿಬ್ಬಂದಿಗೆ ನೀಡಿ ಹೊರಟು ಹೋಗಿದ್ದಾರೆ’ ಎಂದು ದೇವಾಲಯದ ಧರ್ಮದರ್ಶಿ ಪ್ರಕಾಶ್ ತಿಳಿಸಿದ್ದಾರೆ.