ಪ್ರಸ್ತುತ ನ್ಯಾಯಾಲಯದ ಆದೇಶದಂತೆ ಮೀಸಲಾತಿ ಕರಡು ಪಟ್ಟಿ ಬಿಡುಗಡೆ ಮಾಡಲಾಗಿದೆ. 7 ದಿನಗಳ ಒಳಗಾಗಿ ಕಾರಣ ಒಳಗೊಂಡಂತೆ ಜಿಲ್ಲಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ವಾರ್ಡ್ಗಳ ಗಡಿ ಗುರುತಿಸುವಿಕೆ ಗೊಂದಲದ ಕುರಿತ ಇದೇ ತಿಂಗಳ 27ರಂದು ನ್ಯಾಯಾಲಯದ ಮುಂದೆ ಪ್ರಕರಣ ವಿಚಾರಣೆಗೆ ಬರಲಿದ್ದು, ಅಂದಿನ ಆದೇಶದ ನಂತರ ನಗರಸಭೆಗೆ ಚುನಾವಣೆ ನಡೆಯುವ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ.