<p><strong>ದೊಡ್ಡಬಳ್ಳಾಪುರ: ‘</strong>ಎನ್ಸಿಸಿ ದಿನ’ದ ಅಂಗವಾಗಿ ಶುಕ್ರವಾರ ಇಲ್ಲಿನ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಎನ್ಸಿಸಿ ವಿದ್ಯಾರ್ಥಿಗಳು ಹುಲುಕುಡಿ ಬೆಟ್ಟದವರೆಗೆ ಸೈಕ್ಲಿಂಗ್ ನಡೆಸಿದರು.</p>.<p>ಬೆಳಗ್ಗೆ 6:30ಕ್ಕೆ ಕಾಲೇಜಿನಿಂದ ಆರಂಭವಾದ ಸೈಕ್ಲಿಂಗ್ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದವರೆಗೆ ನಡೆಯಿತು. ಎನ್ಸಿಸಿ ವಿದ್ಯಾರ್ಥಿಗಳು ಹುಲುಕುಡಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಮೂಲಕ ತೆರಳಿ ಬೆಟ್ಟದ ಮೇಲೆ ಸ್ವಚ್ಛತಾ ಕಾರ್ಯ ನಡೆಸಿದರು.</p>.<p>ವಿದ್ಯಾರ್ಥಿ ಜೀವನದಲ್ಲಿ ಓದಿಗೆ ಮಾತ್ರ ಸೀಮಿತವಾಗಿರದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಆ ಮೂಲಕ ತಮ್ಮ ಬದುಕಿನ ಅನುಭವ ಹೆಚ್ಚಿಸಿಕೊಳ್ಳಬೇಕು. ಉತ್ತಮ ಅರೋಗ್ಯ ಉತ್ತಮ ಸಮಾಜ ನಿರ್ಮಿಸುವಲ್ಲಿ ಎನ್ಸಿಸಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ. ಈ ದಿಸೆಯಲ್ಲಿ ಎನ್ಸಿಸಿ ದಿನದ ನೆನಪಿನಲ್ಲಿ ಸೈಕ್ಲಿಂಗ್ ನಡೆಸಲಾಗಿದೆ ಎಂದು ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕ್ಯಾಪ್ಟನ್ ಎನ್.ಶ್ರೀನಿವಾಸ್ ತಿಳಿಸಿದರು.</p>.<p>ಆಧುನಿಕತೆಯ ಬಳುವಳಿಯಲ್ಲಿ ಮೂಲ ಬದುಕಿನ ರೂಢಿಗಳು ಮರೆಯಾಗುತ್ತಿವೆ. ದುಬಾರಿ ವಾಹನದ ಹುಚ್ಚು ಮನಸ್ಸನ್ನು ಬದಲಿಸುತ್ತಿದೆ. ಅದು ಬದಲಾಗಬೇಕು ಎಂದು ಕಾಲೇಜಿನ ಉಪ ಪ್ರಾಂಶುಪಾಲ ಎಸ್.ಎಸ್.ಶಿವಶಂಕರ್ ಹೇಳಿದರು.</p>.<p>ಮೇಜರ್ ಎಸ್.ಮಹಾಬಲೇಶ್ವರ್, ಲೆಫ್ಟಿನಂಟ್ ಪ್ರವೀಣ್, ಎನ್ಸಿಸಿ ಅಧಿಕಾರಿ ಸಿ.ಕೆ.ಶ್ರೀಕಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: ‘</strong>ಎನ್ಸಿಸಿ ದಿನ’ದ ಅಂಗವಾಗಿ ಶುಕ್ರವಾರ ಇಲ್ಲಿನ ಶ್ರೀಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಎನ್ಸಿಸಿ ವಿದ್ಯಾರ್ಥಿಗಳು ಹುಲುಕುಡಿ ಬೆಟ್ಟದವರೆಗೆ ಸೈಕ್ಲಿಂಗ್ ನಡೆಸಿದರು.</p>.<p>ಬೆಳಗ್ಗೆ 6:30ಕ್ಕೆ ಕಾಲೇಜಿನಿಂದ ಆರಂಭವಾದ ಸೈಕ್ಲಿಂಗ್ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದವರೆಗೆ ನಡೆಯಿತು. ಎನ್ಸಿಸಿ ವಿದ್ಯಾರ್ಥಿಗಳು ಹುಲುಕುಡಿ ಬೆಟ್ಟಕ್ಕೆ ಟ್ರೆಕ್ಕಿಂಗ್ ಮೂಲಕ ತೆರಳಿ ಬೆಟ್ಟದ ಮೇಲೆ ಸ್ವಚ್ಛತಾ ಕಾರ್ಯ ನಡೆಸಿದರು.</p>.<p>ವಿದ್ಯಾರ್ಥಿ ಜೀವನದಲ್ಲಿ ಓದಿಗೆ ಮಾತ್ರ ಸೀಮಿತವಾಗಿರದೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಆ ಮೂಲಕ ತಮ್ಮ ಬದುಕಿನ ಅನುಭವ ಹೆಚ್ಚಿಸಿಕೊಳ್ಳಬೇಕು. ಉತ್ತಮ ಅರೋಗ್ಯ ಉತ್ತಮ ಸಮಾಜ ನಿರ್ಮಿಸುವಲ್ಲಿ ಎನ್ಸಿಸಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ. ಈ ದಿಸೆಯಲ್ಲಿ ಎನ್ಸಿಸಿ ದಿನದ ನೆನಪಿನಲ್ಲಿ ಸೈಕ್ಲಿಂಗ್ ನಡೆಸಲಾಗಿದೆ ಎಂದು ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕ್ಯಾಪ್ಟನ್ ಎನ್.ಶ್ರೀನಿವಾಸ್ ತಿಳಿಸಿದರು.</p>.<p>ಆಧುನಿಕತೆಯ ಬಳುವಳಿಯಲ್ಲಿ ಮೂಲ ಬದುಕಿನ ರೂಢಿಗಳು ಮರೆಯಾಗುತ್ತಿವೆ. ದುಬಾರಿ ವಾಹನದ ಹುಚ್ಚು ಮನಸ್ಸನ್ನು ಬದಲಿಸುತ್ತಿದೆ. ಅದು ಬದಲಾಗಬೇಕು ಎಂದು ಕಾಲೇಜಿನ ಉಪ ಪ್ರಾಂಶುಪಾಲ ಎಸ್.ಎಸ್.ಶಿವಶಂಕರ್ ಹೇಳಿದರು.</p>.<p>ಮೇಜರ್ ಎಸ್.ಮಹಾಬಲೇಶ್ವರ್, ಲೆಫ್ಟಿನಂಟ್ ಪ್ರವೀಣ್, ಎನ್ಸಿಸಿ ಅಧಿಕಾರಿ ಸಿ.ಕೆ.ಶ್ರೀಕಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>