<p><strong>ದೊಡ್ಡಬಳ್ಳಾಪುರ</strong>: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಪಿ.ಎಂ ಸ್ವನಿಧಿ ಯೋಜನೆ ಕುರಿತು ಅರಿವು ಕಾರ್ಯಕ್ರಮ ನಡೆಯಿತು.</p>.<p>ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಮಾತನಾಡಿ, ಪಿ.ಎಂ ಸ್ವನಿಧಿ ಯೋಜನೆಯು ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆ ಆರಂಭಿಸಿದ ಕಿರುಸಾಲ ಯೋಜನೆಯಾಗಿದೆ. ಯಾವುದೇ ಮೇಲಾಧಾರವಿಲ್ಲದೆ ವ್ಯಾಪಾರ ಬಂಡವಾಳಕ್ಕಾಗಿ ಸುಲಭವಾಗಿ ಸಾಲವನ್ನು ಒದಗಿಸುತ್ತದೆ ಎಂದರು.</p>.<p>2020 ಜೂ.1ರಂದು ಪ್ರಾರಂಭಿಸಿದ ಪಿ.ಎಂ ಸ್ವನಿಧಿ ಯೋಜನೆಯು ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ವ್ಯವಹಾರ ಪುನರಾರಂಭಿಸಲು, ಅನೌಪಚಾರಿಕ ಸಾಲಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಆರ್ಥಿಕ ಯೋಗಕ್ಷೇಮ ಸುಧಾರಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಪಿ.ಎಂ ಸ್ವನಿಧಿ ಯೋಜನೆಯ ಬಗ್ಗೆ ಅರಿವು ನೀಡಲಾಯಿತು. ಬೀದಿಬದಿ ವ್ಯಾಪಾರಿಗಳಿಗೆ ನೀಡಲಾಗುವ ಸಾಲ ಸೌಲಭ್ಯ ಹಾಗೂ ಕ್ರೆಡಿಟ್ ಕಾರ್ಡ್ ಬಗ್ಗೆ ಮಾಹಿತಿ ನೀಡಲಾಯಿತು.</p>.<p>ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತ ಮುರಳಿಧರ್, ಮುಖ್ಯಾಧಿಕಾರಿ ಅಮರನಾಥ್, ಸಮುದಾಯ ಸಂಘಟನ ಅಧಿಕಾರಿ ವೈ.ಎಂ.ರೂಪ, ಎಸ್.ಬಿ.ಐ, ಇಂಡಿಯನ್ ಓವರ್ಸಿಸ್ ಬ್ಯಾಂಕ್, ಎಚ್.ಡಿ.ಎಫ್.ಸಿ ಬ್ಯಾಂಕ್ ವ್ಯವಸ್ಥಾಪಕ, ಸ್ವಸಹಾಯ ಸಂಘದ ಸದಸ್ಯರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಬೀದಿಬದಿ ವ್ಯಾಪಾರಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-15-143214052</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ</strong>: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವತಿಯಿಂದ ಬೀದಿಬದಿ ವ್ಯಾಪಾರಿಗಳಿಗೆ ಪಿ.ಎಂ ಸ್ವನಿಧಿ ಯೋಜನೆ ಕುರಿತು ಅರಿವು ಕಾರ್ಯಕ್ರಮ ನಡೆಯಿತು.</p>.<p>ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಮಾತನಾಡಿ, ಪಿ.ಎಂ ಸ್ವನಿಧಿ ಯೋಜನೆಯು ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆ ಆರಂಭಿಸಿದ ಕಿರುಸಾಲ ಯೋಜನೆಯಾಗಿದೆ. ಯಾವುದೇ ಮೇಲಾಧಾರವಿಲ್ಲದೆ ವ್ಯಾಪಾರ ಬಂಡವಾಳಕ್ಕಾಗಿ ಸುಲಭವಾಗಿ ಸಾಲವನ್ನು ಒದಗಿಸುತ್ತದೆ ಎಂದರು.</p>.<p>2020 ಜೂ.1ರಂದು ಪ್ರಾರಂಭಿಸಿದ ಪಿ.ಎಂ ಸ್ವನಿಧಿ ಯೋಜನೆಯು ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ವ್ಯವಹಾರ ಪುನರಾರಂಭಿಸಲು, ಅನೌಪಚಾರಿಕ ಸಾಲಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಆರ್ಥಿಕ ಯೋಗಕ್ಷೇಮ ಸುಧಾರಿಸಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಪಿ.ಎಂ ಸ್ವನಿಧಿ ಯೋಜನೆಯ ಬಗ್ಗೆ ಅರಿವು ನೀಡಲಾಯಿತು. ಬೀದಿಬದಿ ವ್ಯಾಪಾರಿಗಳಿಗೆ ನೀಡಲಾಗುವ ಸಾಲ ಸೌಲಭ್ಯ ಹಾಗೂ ಕ್ರೆಡಿಟ್ ಕಾರ್ಡ್ ಬಗ್ಗೆ ಮಾಹಿತಿ ನೀಡಲಾಯಿತು.</p>.<p>ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಶ್ವೇತ ಮುರಳಿಧರ್, ಮುಖ್ಯಾಧಿಕಾರಿ ಅಮರನಾಥ್, ಸಮುದಾಯ ಸಂಘಟನ ಅಧಿಕಾರಿ ವೈ.ಎಂ.ರೂಪ, ಎಸ್.ಬಿ.ಐ, ಇಂಡಿಯನ್ ಓವರ್ಸಿಸ್ ಬ್ಯಾಂಕ್, ಎಚ್.ಡಿ.ಎಫ್.ಸಿ ಬ್ಯಾಂಕ್ ವ್ಯವಸ್ಥಾಪಕ, ಸ್ವಸಹಾಯ ಸಂಘದ ಸದಸ್ಯರು, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಬೀದಿಬದಿ ವ್ಯಾಪಾರಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-15-143214052</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>