<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ಪೈಪ್ ಹಾಗೂ ಸೇವಂತಿಗೆ ಹೂವಿನ ಸಸಿಗಳನ್ನು ದುಷ್ಕರ್ಮಿಗಳು ಕಿತ್ತು ನಾಶಪಡಿಸಲಾಗಿದೆ.</p>.<p>ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಸಾವಿರಾರು ರೂಪಾಯಿ ಖರ್ಚು ಮಾಡಿ ಸೇವಂತಿಗೆ, ಬಟಾನ್ಸ್ ಹೂವಿನ ಸಸಿ ನಾಟಿ ಮಾಡಿದ್ದರು. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ಗಂಗಪ್ಪ ಅವರು ತೋಟದ ಬಳಿ ಬಂದಿದ್ದಾರೆ. ಕಿಡಿಗೇಡಿಗಳು ಉದ್ದೇಶಪೂರಕವಾಗಿಯೇ ಹೂವಿನ ಬೆಳೆಗೆ ಹಾಕಿದ್ದ ಹನಿ ನೀರಾವರಿಯ ಪೈಪ್ಗಳನ್ನು ಅಲ್ಲಲ್ಲಿ ಹೊಡೆದು, ಕಿತ್ತು ಹಾಕಿದ್ದಾರೆ. ಹೂವಿನ ಸಸಿಗಳನ್ನು ನಾಶಪಡಿಸಿದ್ದಾರೆ.</p>.<p>ಗಂಗಪ್ಪ ಅವರ ತೋಟದಲ್ಲೇ ಇತ್ತೀಚೆಗಷ್ಟೇ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ಈ ಸಂಬಂಧ ಅವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ತಾಲ್ಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ಪೈಪ್ ಹಾಗೂ ಸೇವಂತಿಗೆ ಹೂವಿನ ಸಸಿಗಳನ್ನು ದುಷ್ಕರ್ಮಿಗಳು ಕಿತ್ತು ನಾಶಪಡಿಸಲಾಗಿದೆ.</p>.<p>ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಸಾವಿರಾರು ರೂಪಾಯಿ ಖರ್ಚು ಮಾಡಿ ಸೇವಂತಿಗೆ, ಬಟಾನ್ಸ್ ಹೂವಿನ ಸಸಿ ನಾಟಿ ಮಾಡಿದ್ದರು. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ಗಂಗಪ್ಪ ಅವರು ತೋಟದ ಬಳಿ ಬಂದಿದ್ದಾರೆ. ಕಿಡಿಗೇಡಿಗಳು ಉದ್ದೇಶಪೂರಕವಾಗಿಯೇ ಹೂವಿನ ಬೆಳೆಗೆ ಹಾಕಿದ್ದ ಹನಿ ನೀರಾವರಿಯ ಪೈಪ್ಗಳನ್ನು ಅಲ್ಲಲ್ಲಿ ಹೊಡೆದು, ಕಿತ್ತು ಹಾಕಿದ್ದಾರೆ. ಹೂವಿನ ಸಸಿಗಳನ್ನು ನಾಶಪಡಿಸಿದ್ದಾರೆ.</p>.<p>ಗಂಗಪ್ಪ ಅವರ ತೋಟದಲ್ಲೇ ಇತ್ತೀಚೆಗಷ್ಟೇ ಪಂಪ್, ಮೋಟರ್ ಹಾಗೂ ಕೇಬಲ್ ಕಳವಾಗಿತ್ತು. ಇದೀಗ ಡ್ರಿಪ್ ಪೈಪ್, ಸೇವಂತಿ ಸಸಿ ನಾಶ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಜೊತೆಗೆ ಕಿಡಿಗೇಡಿಗಳ ಈ ಕೃತ್ಯದಿಂದಾಗಿ ತೋಟದಲ್ಲಿ ಉಳಿದುಕೊಳ್ಳಲು ಭೀತಿ ಎದುರಾಗಿದೆ. ಈ ಸಂಬಂಧ ಅವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>