ಗ್ರಾಮದ ರೈತ ಗಂಗಪ್ಪ ಅವರು ತಮ್ಮ ಜಮೀನಿನಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಸಾವಿರಾರು ರೂಪಾಯಿ ಖರ್ಚು ಮಾಡಿ ಸೇವಂತಿಗೆ, ಬಟಾನ್ಸ್ ಹೂವಿನ ಸಸಿ ನಾಟಿ ಮಾಡಿದ್ದರು. ಈ ಭಾಗದಲ್ಲಿ ಚಿರತೆ ಕಾಟಕ್ಕೆ ಹೆದರಿ ರಾತ್ರಿ ಮನೆಯಿಂದ ತಡವಾಗಿ ಗಂಗಪ್ಪ ಅವರು ತೋಟದ ಬಳಿ ಬಂದಿದ್ದಾರೆ. ಕಿಡಿಗೇಡಿಗಳು ಉದ್ದೇಶಪೂರಕವಾಗಿಯೇ ಹೂವಿನ ಬೆಳೆಗೆ ಹಾಕಿದ್ದ ಹನಿ ನೀರಾವರಿಯ ಪೈಪ್ಗಳನ್ನು ಅಲ್ಲಲ್ಲಿ ಹೊಡೆದು, ಕಿತ್ತು ಹಾಕಿದ್ದಾರೆ. ಹೂವಿನ ಸಸಿಗಳನ್ನು ನಾಶಪಡಿಸಿದ್ದಾರೆ.