<p><strong>ದೊಡ್ಡಬಳ್ಳಾಪುರ: </strong>ನಗರದ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.</p>.<p>ಸುಮಾರು 3 ಟನ್ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶ ಪಡಿಸಿಕೊಂಡಿದ್ದು, ₹25 ಸಾವಿರ ದಂಡ ವಿಧಿಸಲಾಗಿದೆ. ಕಡಿಮೆ ಮೈಕ್ರಾನ್ ಪ್ಲಾಸ್ಟಿಕ್ ಚೀಲ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರೊಂದಿಗೆ ಪ್ಲಾಸ್ಟಿಕ್ ಮಾದರಿಯ ಕೈ ಚೀಲಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಜಾಗೃತಿ ಮೂಡಿಸಲಾಗಿದೆ. ಇನ್ನು ಮುಂದೆ ಇದೇ ರೀತಿಯ ತಪ್ಪು ಎಸಗಿದರೆ ದಂಡ ವಿಧಿಸುವುದರೊಂದಿಗೆ ಅಂಗಡಿ ಪರವಾನಗಿ ರದ್ದು ಪಡಿಸಲಾಗುವುದು ಎಂದು ಪೌರಾಯುಕ್ತ ಆರ್. ಕಾರ್ತಿಕೇಶ್ವರ ಹೇಳಿದರು.</p>.<p>ನಗರಸಭೆ ಅಧ್ಯಕ್ಷೆ ಸುಮಿತ್ರಾ.ಕೆ.ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪರಿಸರ ವಿಭಾಗದ ಸಹಾಯಕ ಎಂಜಿನಿಯರ್ ಈರಣ್ಣ, ಅರೋಗ್ಯ ನೀರಿಕ್ಷಕರು ಮತ್ತು ಪೌರ ಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ನಗರದ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.</p>.<p>ಸುಮಾರು 3 ಟನ್ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶ ಪಡಿಸಿಕೊಂಡಿದ್ದು, ₹25 ಸಾವಿರ ದಂಡ ವಿಧಿಸಲಾಗಿದೆ. ಕಡಿಮೆ ಮೈಕ್ರಾನ್ ಪ್ಲಾಸ್ಟಿಕ್ ಚೀಲ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರೊಂದಿಗೆ ಪ್ಲಾಸ್ಟಿಕ್ ಮಾದರಿಯ ಕೈ ಚೀಲಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಜಾಗೃತಿ ಮೂಡಿಸಲಾಗಿದೆ. ಇನ್ನು ಮುಂದೆ ಇದೇ ರೀತಿಯ ತಪ್ಪು ಎಸಗಿದರೆ ದಂಡ ವಿಧಿಸುವುದರೊಂದಿಗೆ ಅಂಗಡಿ ಪರವಾನಗಿ ರದ್ದು ಪಡಿಸಲಾಗುವುದು ಎಂದು ಪೌರಾಯುಕ್ತ ಆರ್. ಕಾರ್ತಿಕೇಶ್ವರ ಹೇಳಿದರು.</p>.<p>ನಗರಸಭೆ ಅಧ್ಯಕ್ಷೆ ಸುಮಿತ್ರಾ.ಕೆ.ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪರಿಸರ ವಿಭಾಗದ ಸಹಾಯಕ ಎಂಜಿನಿಯರ್ ಈರಣ್ಣ, ಅರೋಗ್ಯ ನೀರಿಕ್ಷಕರು ಮತ್ತು ಪೌರ ಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>