<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ಚಿಗರೇನಹಳ್ಳಿ ಎಂ.ಎಸ್.ಜಿ.ಪಿ ಕಸ ವಿಲೇವಾರಿ ಘಟಕದತ್ತ ನಿಯಮ ಬಾಹಿರವಾಗಿ ಹೆಚ್ಚುವರಿ ಕಸ ತುಂಬಿಕೊಂಡು ಬರುತ್ತಿದ್ದ ಲಾರಿಗಳನ್ನು ಶಾಸಕ ಧೀರಜ್ ಮುನಿರಾಜು ಮಂಗಳವಾರ ತಡೆದು ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ.</p>.<p>ದೊಡ್ಡಮಂಕಲಾಳ ಸಮೀಪ ಈ ತಪಾಸಣೆ ನಡೆಸಿದ ಶಾಸಕರು, ಲಾರಿಗಳ ಸಾಮರ್ಥ್ಯ ನವೀಕರಣ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಕಂಡು ಬಂದ ಹಿನ್ನೆಲೆಯಲ್ಲಿ ಆರ್.ಟಿ.ಒ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿ ದಂಡ ವಿಧಿಸುವಂತೆ ಸೂಚಿಸಿದರು.</p>.<p>ಸ್ಥಳದಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ಎಂ.ಎಸ್.ಜಿ.ಪಿ ಕಸ ವಿಲೇವಾರಿ ಘಟಕ ನಿಯಮಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿರುವ ಕುರಿತು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು (ಪಿಐಎಲ್) ದಾಖಲಿಸಿ ಕಾನೂನು ಹೋರಾಟ ಮುಂದುವರಿಸಲಾಗಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ಸಮೀಪದ ಮಹದೇವಪುರದ ಕಸ ವಿಲೇವಾರಿ ಘಟಕದಲ್ಲಿ ಪ್ರತಿಭಟನೆ ನಡೆಯುತ್ತಿರುವ ಕಾರಣಕ್ಕೆ ಅಲ್ಲಿಗೆ ಹೋಗಬೇಕಿದ್ದ ಸುಮಾರು 400 ಲಾರಿಗಳನ್ನು ಹೆಚ್ಚುವರಿಯಾಗಿ ಇಲ್ಲಿಗೆ ಕಳುಹಿಸಲಾಗುತ್ತಿದೆ. ಇದು ಖಂಡನೀಯ ಮತ್ತು ಸಂಚುಪೂರ್ವಕವಾಗಿ ದೊಡ್ಡಬಳ್ಳಾಪುರವನ್ನು ಕಸದ ತಾಣವಾಗಿ ಮಾಡುವ ಪ್ರಯತ್ನವಾಗಿದೆ ಎಂದು ಶಾಸಕ ಆರೋಪಿಸಿದರು.</p>.<p>ಮತ್ತೆ ತಲೆಯೆತ್ತಿದ ಟೆರ್ರಾ ಫಾಂ ಕಳವಳ: ಈ ಹಿಂದೆ ಸ್ಥಳೀಯರ ತೀವ್ರ ಪ್ರತಿಭಟನೆಯಿಂದಾಗಿ ಮುಚ್ಚಲಾಗಿದ್ದ ಗುಂಡ್ಲಹಳ್ಳಿ ಟೆರ್ರಾ ಫಾಂ ಕಸ ವಿಲೇವಾರಿ ಘಟಕವನ್ನು ಮರು ಆರಂಭಿಸಲು ಸಿದ್ಧತೆ ನಡೆಯುತ್ತಿರುವ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಗಮನಕ್ಕೆ ತಂದು ವಿರೋಧ ವ್ಯಕ್ತಪಡಿಸಲಾಗಿದೆ. ಯಾವುದೇ ಕಾರಣಕ್ಕೂ ಈ ಘಟಕವನ್ನು ಮರು ತೆರೆಯಲು ಬಿಡುವುದಿಲ್ಲ ಎಂದರು. </p>.<p>ಶಾಸಕರು ಮತ್ತು ಸ್ಥಳೀಯರು ಕಸದ ಲಾರಿಗಳನ್ನು ತಡೆದ ಪರಿಣಾಮ ನೂರಾರು ಲಾರಿಗಳು ರಸ್ತೆ ಬದಿಯಲ್ಲೇ ಸಾಲುಗಟ್ಟಿ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ತಾಲ್ಲೂಕಿನ ಚಿಗರೇನಹಳ್ಳಿ ಎಂ.ಎಸ್.ಜಿ.ಪಿ ಕಸ ವಿಲೇವಾರಿ ಘಟಕದತ್ತ ನಿಯಮ ಬಾಹಿರವಾಗಿ ಹೆಚ್ಚುವರಿ ಕಸ ತುಂಬಿಕೊಂಡು ಬರುತ್ತಿದ್ದ ಲಾರಿಗಳನ್ನು ಶಾಸಕ ಧೀರಜ್ ಮುನಿರಾಜು ಮಂಗಳವಾರ ತಡೆದು ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ.</p>.<p>ದೊಡ್ಡಮಂಕಲಾಳ ಸಮೀಪ ಈ ತಪಾಸಣೆ ನಡೆಸಿದ ಶಾಸಕರು, ಲಾರಿಗಳ ಸಾಮರ್ಥ್ಯ ನವೀಕರಣ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಕಂಡು ಬಂದ ಹಿನ್ನೆಲೆಯಲ್ಲಿ ಆರ್.ಟಿ.ಒ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಿ ದಂಡ ವಿಧಿಸುವಂತೆ ಸೂಚಿಸಿದರು.</p>.<p>ಸ್ಥಳದಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ಎಂ.ಎಸ್.ಜಿ.ಪಿ ಕಸ ವಿಲೇವಾರಿ ಘಟಕ ನಿಯಮಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿರುವ ಕುರಿತು ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು (ಪಿಐಎಲ್) ದಾಖಲಿಸಿ ಕಾನೂನು ಹೋರಾಟ ಮುಂದುವರಿಸಲಾಗಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ಸಮೀಪದ ಮಹದೇವಪುರದ ಕಸ ವಿಲೇವಾರಿ ಘಟಕದಲ್ಲಿ ಪ್ರತಿಭಟನೆ ನಡೆಯುತ್ತಿರುವ ಕಾರಣಕ್ಕೆ ಅಲ್ಲಿಗೆ ಹೋಗಬೇಕಿದ್ದ ಸುಮಾರು 400 ಲಾರಿಗಳನ್ನು ಹೆಚ್ಚುವರಿಯಾಗಿ ಇಲ್ಲಿಗೆ ಕಳುಹಿಸಲಾಗುತ್ತಿದೆ. ಇದು ಖಂಡನೀಯ ಮತ್ತು ಸಂಚುಪೂರ್ವಕವಾಗಿ ದೊಡ್ಡಬಳ್ಳಾಪುರವನ್ನು ಕಸದ ತಾಣವಾಗಿ ಮಾಡುವ ಪ್ರಯತ್ನವಾಗಿದೆ ಎಂದು ಶಾಸಕ ಆರೋಪಿಸಿದರು.</p>.<p>ಮತ್ತೆ ತಲೆಯೆತ್ತಿದ ಟೆರ್ರಾ ಫಾಂ ಕಳವಳ: ಈ ಹಿಂದೆ ಸ್ಥಳೀಯರ ತೀವ್ರ ಪ್ರತಿಭಟನೆಯಿಂದಾಗಿ ಮುಚ್ಚಲಾಗಿದ್ದ ಗುಂಡ್ಲಹಳ್ಳಿ ಟೆರ್ರಾ ಫಾಂ ಕಸ ವಿಲೇವಾರಿ ಘಟಕವನ್ನು ಮರು ಆರಂಭಿಸಲು ಸಿದ್ಧತೆ ನಡೆಯುತ್ತಿರುವ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಗಮನಕ್ಕೆ ತಂದು ವಿರೋಧ ವ್ಯಕ್ತಪಡಿಸಲಾಗಿದೆ. ಯಾವುದೇ ಕಾರಣಕ್ಕೂ ಈ ಘಟಕವನ್ನು ಮರು ತೆರೆಯಲು ಬಿಡುವುದಿಲ್ಲ ಎಂದರು. </p>.<p>ಶಾಸಕರು ಮತ್ತು ಸ್ಥಳೀಯರು ಕಸದ ಲಾರಿಗಳನ್ನು ತಡೆದ ಪರಿಣಾಮ ನೂರಾರು ಲಾರಿಗಳು ರಸ್ತೆ ಬದಿಯಲ್ಲೇ ಸಾಲುಗಟ್ಟಿ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>