ಸಾರ್ವಜನಿಕರು ಬೆಳಿಗ್ಗೆ ಹಾಗೂ ಸಂಜೆ ವೇಳೆ ವಾಯುವಿಹಾರಕ್ಕೆ ತೆರಳುವಾಗ ರಸ್ತೆಗೆ ಬರುವ ನಾಯಿಗಳು ಜನರ ಮೇಲೆ ದಾಳಿ ನಡೆಸುತ್ತಿವೆ. ಇದರಿಂದ ತಪ್ಪಿಸಿಕೊಳ್ಳಲಾಗದ ಜನರು ಭಯಭೀತರಾಗಿ ಓಡುವಾಗ ಹಿಂಬಾಲಿಸಿ ಕಚ್ಚುತ್ತಿವೆ. ಮಕ್ಕಳು ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಾಯಗೊಳಿಸುತ್ತಿರುವ ನಾಯಿಗಳನ್ನು ಪುರಸಭೆಯವರು ಹಿಡಿದು ಊರಿನಿಂದ ಹೊರಗೆ ಬಿಡಬೇಕು. ಮಾಲೀಕರಿಗೆ ನೋಟಿಸ್ ಜಾರಿ ಮಾಡಿ ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.