ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಆನೇಕಲ್‌: ಅಪ್ಪ–ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು...

ಕ್ಷುಲ್ಲಕ ಕಾರಣಕ್ಕೆ ಪೋಷಕರ ಜಗಳ ಕೊಲೆಯಲ್ಲಿ ಅಂತ್ಯ l ಐದು ತಿಂಗಳಲ್ಲಿ 7 ಕೊಲೆ ಪ್ರಕರಣ
Published : 13 ಜೂನ್ 2025, 13:21 IST
Last Updated : 13 ಜೂನ್ 2025, 13:21 IST
ಫಾಲೋ ಮಾಡಿ
Comments
ಪೊಲೀಸ್‌ ಠಾಣೆಯಲ್ಲಿ ಸಮಾಲೋಚನೆ
ಆನೇಕಲ್‌ ಪೊಲೀಸ್‌ ಉಪವಿಭಾಗ ವ್ಯಾಪ್ತಿಯಲ್ಲಿ ಕಳೆದ ಐದಾರು ತಿಂಗಳಿಂದ ಪತಿ ತನ್ನ ಪತ್ನಿಯನ್ನೇ ಹತ್ಯೆ ಮಾಡಿದ ಏಳು ಪ್ರಕರಣ ದಾಖಲಾಗಿವೆ. ಈ ಪೈಕಿ ಬಹುತೇಕ ಪ್ರಕರಣಗಳಲ್ಲಿ ವಲಸಿಗರೇ ಹೆಚ್ಚಾಗಿದ್ದಾರೆ. ವಲಸಿಗರ ಚಲನವಲನಗಳ ಮೇಲೆ ಆನೇಕಲ್‌ ಪೊಲೀಸರು ಹದ್ದಿನ ಕಣ್ಣಿಟ್ಟಿದೆ. ಮಹಿಳೆಯರು ತಮ್ಮ ಸಮಸ್ಯೆಯ ಆರಂಭದಲ್ಲಿಯೇ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಅವರನ್ನು ಆಪ್ತ ಸಮಾಲೋಚನೆ ನಡೆಸಿ ಸಮಸ್ಯೆಯ ಪರಿಹಾರಕ್ಕೆ ಪೊಲೀಸರು ಯತ್ನಿಸುತ್ತಾರೆ ಎಂದು ಆನೇಕಲ್‌ ಡಿವೈಎಸ್ಪಿ ಮೋಹನ್‌ ಕುಮಾರ್‌ ತಿಳಿಸಿದ್ದಾರೆ.
ಈಚಿನ ದಿನಗಳಲ್ಲಿ ಪತಿಯಿಂದ ಪತ್ನಿ ಹತ್ಯೆ ಪ್ರಕರಣ ಹೆಚ್ಚಾಗುತ್ತಿದೆ. ಇಂತಹ ಸಮಸ್ಯೆಯನ್ನು ಮಹಿಳಾ ಆಯೋಗ, ಮಹಿಳಾ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ ಆರಂಭದಲ್ಲೇ ಪರಿಹಾರ ಹುಡಕಬೇಕು.
ಗೌರಮ್ಮ, ಆನೇಕಲ್
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯ ಕೊಲೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಕೊಲೆಯೊಂದ ಪರಿಹಾರ ಅಲ್ಲ. ಪತಿ ಮತ್ತು ಪತ್ನಿಯರ ನಡುವೆ ಅನ್ಯೋನ್ಯತೆ ಅತ್ಯಂತ ಅವಶ್ಯಕ
ಭವ್ಯಾ, ಚಂದಾಪುರ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT