ಆದರೆ,ಕುರಿತು ಪ್ರತಿಕ್ರಿಯೆ ನೀಡಿದ ಪಿಳ್ಳಮುನಿಶಾಮಪ್ಪ ‘ಹಿಂದೆ ಶಾಸಕನಾಗಿ ಎಲ್ಲ ಸಮುದಾಯಗಳ ಪ್ರೀತಿ – ವಿಶ್ವಾಸ ಗಳಿಸಿದ್ದೇನೆ. ಕೆಲಸದ ನಿಮಿತ್ತ ಡಾ.ಕೆ.ಸುಧಾಕರ್ ಅವರನ್ನು ಭೇಟಿ ಮಾಡಲು ಅವರ ಮನೆಗೆ ಹೋಗಿದ್ದು ನಿಜ. ಅವರ ಪರವಾಗಿ ಪ್ರಚಾರಕ್ಕೆ ಅಲ್ಲ. ನಾನು ಇನ್ನೂ ಜೆಡಿಎಸ್ನಲ್ಲೇ ಇದ್ದೇನೆ. ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ಬಗ್ಗೆ ತೀರ್ಮಾನಿಸಿಲ್ಲ. ಕ್ಷೇತ್ರದಲ್ಲಿ ನನ್ನನ್ನು ಶಾಸಕನನ್ನಾಗಿ ಮಾಡಲು ಶ್ರಮಿಸಿದ ಮುಖಂಡರು, ಕಾರ್ಯಕರ್ತರು ಇದ್ದಾರೆ. ಅವರೊಂದಿಗೆ ಚರ್ಚಿಸಿ ನಿರ್ಧಾರಕೈಗೊಳ್ಳುತ್ತೇನೆ. ಊಹಾಪೋಹಾಗಳಿಗೆ ಯಾರೂ ಕಿವಿಗೊಡಬಾರದು’ ಎಂದು ಹೇಳಿದರು.