ಬಿಎಸ್ಪಿ ರಾಜ್ಯ ಖಜಾಂಚಿ ಡಾ.ಚಿನ್ನಪ್ಪ.ವೈ.ಚಿಕ್ಕಹಾಗಡೆ ಮಾತನಾಡಿ, ರಾಜ್ಯದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆಗಳಲ್ಲಿ ಬಿಎಸ್ಪಿ ಪಕ್ಷವು ಹೆಚ್ಚು ಸ್ಥಾನವನ್ನು ಗಳಿಸಲು ಶ್ರಮಿಸಲಾಗುವುದು. ಪಕ್ಷವು ನೀಡಿರುವ ಜವಬ್ದಾರಿಯನ್ನು ಬದ್ಧತೆಯಿಂದ ನಿರ್ವಹಿಸಲಾಗುವುದು ಎಂದರು.