‘ಕಲೆ ಮತ್ತು ಕಲಾವಿದರನ್ನು ಗೌರವಿಸಿ ಪ್ರೋತ್ಸಾಹಿಸುವ ಮೂಲಕ ನಮ್ಮ ಸಂಸ್ಕೃತಿ ಬೆಳೆಸಬೇಕು. ಕಲೆಗೆ ಜಾತಿ, ಧರ್ಮದ ಹಂಗಿಲ್ಲ. ಉತ್ತಮ ಕಲಾವಿದರನ್ನು ಸಮಾಜ ಜಾತಿಯ ಚೌಕಟ್ಟು ಮೀರಿ ಗೌರವಿಸುತ್ತದೆ. ಧಾರಾವಾಹಿಗಳ ನಡುವೆಯೂ ಗ್ರಾಮೀಣ ಪ್ರದೇಶಗಳಲ್ಲಿ ಪೌರಾಣಿಕ ನಾಟಕಗಳು ಇಂದಿಗೂ ಜನಾಕರ್ಷಣೆ ಉಳಿಸಿಕೊಂಡಿವೆ. ಕಲಾ ಪ್ರದರ್ಶನಕ್ಕೆ ಸರ್ಕಾರ ಹೆಚ್ಚಿನ ನೆರವು ನೀಡಬೇಕು. ಕಲಾವಿದರ ಮಾಸಾಶನವನ್ನು ಹೆಚ್ಚಿಸಬೇಕು’ ಎಂದು ಅವರು ಒತ್ತಾಯಿಸಿದರು.