<p><strong>ದೇವನಹಳ್ಳಿ: </strong>ಇಲ್ಲಿನ ಕೊಯಿರಾ ಕೆರೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರೇ ಭಾನುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಕೆರೆ ನಿರ್ಮಾಣದ ಇತಿಹಾಸ ತಿಳಿದಿಲ್ಲ. ಈಗ ಕೆರೆ ಬರಿದಾಗಿದ್ದು ಪುನರ್ ರೂಪಿಸುವ ಅಗತ್ಯವಿದೆ ಎಂದು ಎಂದು ಅಭಿಪ್ರಾಯಪಟ್ಟರು.</p>.<p>‘ಅಂತರ್ಜಲ ಕುಸಿದು ಕೊಳವೆ ಬಾವಿಗಳಲ್ಲಿ ನೀರು ಸಿಗುತ್ತಿಲ್ಲ. ಯುವಕರು ಸೇರಿ ಕೆರೆ ಅಭಿವೃದ್ಧಿಗೆ ಮುಂದಾಗಿದ್ದೇವೆ’ ಎಂದು ತಿಳಿಸಿದರು.</p>.<p>ಹಸಿರು ಸೇನೆ ಜಿಲ್ಲಾ ಘಟಕ ಅಧ್ಯಕ್ಷ ಕೊಯಿರಾ ಹರೀಶ್ ಮಾತನಾಡಿ, ಕೆರೆ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಶತಮಾನಗಳ ಕೆರೆಗಳನ್ನು ಅಭಿವೃದ್ಧಿಪಡಿಸಿ ಶಾಶ್ವತ ಜಲಮೂಲ ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.</p>.<p>ಮುಖಂಡ ಚಿಕ್ಕೆಗೌಡ ಮಾತನಾಡಿ, ಕಳೆದ ಹತ್ತು ದಿನಗಳಿಂದ ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಳ್ಳುತ್ತಿರುವ ‘ಜಲಮೂಲ ಉಳಿಸಿ’ ವರದಿಯಿಂದ ಎಚ್ಚೆತ್ತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದು ಗ್ರಾಮಸ್ಥರೆಲ್ಲರೂ ಸೇರಿ ಕೆರೆ ಅಭಿವೃದ್ಧಿಗೆ ಮುಂದಾಗಿದ್ದೇವೆ ಎಂದರು.</p>.<p>19.18ಎಕರೆ ಕೆರೆ ವಿಸ್ತೀರ್ಣವಿದ್ದು ಕೆಲವರು ದೇಣಿಗೆ ನೀಡಲು ಮುಂದೆ ಬಂದಿದ್ದಾರೆ. ಕೆಲವರು ಟ್ರ್ಯಾಕ್ಟರ್, ಜೆ.ಸಿ.ಬಿ, ಟಿಪ್ಪರ್, ಲಾರಿ ಬಾಡಿಗೆ ಇಲ್ಲದೆ ಮಣ್ಣು ರವಾನೆಗೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದರು.</p>.<p>ಜಿಲ್ಲಾಧಿಕಾರಿ ಕರೀಗೌಡ ಅವರು ಈ ಕೆಲಸಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೆ, ತಹಸೀಲ್ದಾರ್ ಮಂಜುನಾಥ್ ಕೂಡ ಈ ಅಭಿಯಾನಕ್ಕೆ ಕೈಜೋಡಿಸುವುದಾಗಿ ತಿಳಿಸಿದ್ದಾರೆ.</p>.<p>ಎಂ.ಪಿ.ಸಿ.ಎಸ್ ಅಧ್ಯಕ್ಷ ಎಚ್.ಮುನಿರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ರಮೇಶ್ ಬಾಬು, ಮುನಿರಾಜು, ಮುಖಂಡ ಜೆ.ಸಿ.ಬಿ ರವಿಕುಮಾರ್, ಕೆ.ಎಂ. ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ಇಲ್ಲಿನ ಕೊಯಿರಾ ಕೆರೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರೇ ಭಾನುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಕೆರೆ ನಿರ್ಮಾಣದ ಇತಿಹಾಸ ತಿಳಿದಿಲ್ಲ. ಈಗ ಕೆರೆ ಬರಿದಾಗಿದ್ದು ಪುನರ್ ರೂಪಿಸುವ ಅಗತ್ಯವಿದೆ ಎಂದು ಎಂದು ಅಭಿಪ್ರಾಯಪಟ್ಟರು.</p>.<p>‘ಅಂತರ್ಜಲ ಕುಸಿದು ಕೊಳವೆ ಬಾವಿಗಳಲ್ಲಿ ನೀರು ಸಿಗುತ್ತಿಲ್ಲ. ಯುವಕರು ಸೇರಿ ಕೆರೆ ಅಭಿವೃದ್ಧಿಗೆ ಮುಂದಾಗಿದ್ದೇವೆ’ ಎಂದು ತಿಳಿಸಿದರು.</p>.<p>ಹಸಿರು ಸೇನೆ ಜಿಲ್ಲಾ ಘಟಕ ಅಧ್ಯಕ್ಷ ಕೊಯಿರಾ ಹರೀಶ್ ಮಾತನಾಡಿ, ಕೆರೆ ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಶತಮಾನಗಳ ಕೆರೆಗಳನ್ನು ಅಭಿವೃದ್ಧಿಪಡಿಸಿ ಶಾಶ್ವತ ಜಲಮೂಲ ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.</p>.<p>ಮುಖಂಡ ಚಿಕ್ಕೆಗೌಡ ಮಾತನಾಡಿ, ಕಳೆದ ಹತ್ತು ದಿನಗಳಿಂದ ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಳ್ಳುತ್ತಿರುವ ‘ಜಲಮೂಲ ಉಳಿಸಿ’ ವರದಿಯಿಂದ ಎಚ್ಚೆತ್ತು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದು ಗ್ರಾಮಸ್ಥರೆಲ್ಲರೂ ಸೇರಿ ಕೆರೆ ಅಭಿವೃದ್ಧಿಗೆ ಮುಂದಾಗಿದ್ದೇವೆ ಎಂದರು.</p>.<p>19.18ಎಕರೆ ಕೆರೆ ವಿಸ್ತೀರ್ಣವಿದ್ದು ಕೆಲವರು ದೇಣಿಗೆ ನೀಡಲು ಮುಂದೆ ಬಂದಿದ್ದಾರೆ. ಕೆಲವರು ಟ್ರ್ಯಾಕ್ಟರ್, ಜೆ.ಸಿ.ಬಿ, ಟಿಪ್ಪರ್, ಲಾರಿ ಬಾಡಿಗೆ ಇಲ್ಲದೆ ಮಣ್ಣು ರವಾನೆಗೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದರು.</p>.<p>ಜಿಲ್ಲಾಧಿಕಾರಿ ಕರೀಗೌಡ ಅವರು ಈ ಕೆಲಸಕ್ಕೆ ಬೆಂಬಲ ನೀಡಿದ್ದಾರೆ. ಅಲ್ಲದೆ, ತಹಸೀಲ್ದಾರ್ ಮಂಜುನಾಥ್ ಕೂಡ ಈ ಅಭಿಯಾನಕ್ಕೆ ಕೈಜೋಡಿಸುವುದಾಗಿ ತಿಳಿಸಿದ್ದಾರೆ.</p>.<p>ಎಂ.ಪಿ.ಸಿ.ಎಸ್ ಅಧ್ಯಕ್ಷ ಎಚ್.ಮುನಿರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ರಮೇಶ್ ಬಾಬು, ಮುನಿರಾಜು, ಮುಖಂಡ ಜೆ.ಸಿ.ಬಿ ರವಿಕುಮಾರ್, ಕೆ.ಎಂ. ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>