ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಸಸಿ ನೆಡುವ ಸಪ್ತಾಹಕ್ಕೆ ಚಾಲನೆ

Last Updated 10 ಆಗಸ್ಟ್ 2021, 2:37 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ:ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಸಮೀಪದ ರಾಷ್ಟ್ರೋತ್ಥಾನ ಪರಿಷತ್‌ನಗೋಶಾಲೆಯಲ್ಲಿ ಬೃಂದಾವನ- ಕೃಷಿ ಅರಣ್ಯ ಯೋಜನೆ ಪ್ರದೇಶದಲ್ಲಿ ಸಸಿ ನೆಡುವ ಸಪ್ತಾಹ ಆರಂಭಗೊಂಡಿದ್ದು, ಶಾಸಕ ಅರವಿಂದ ಲಿಂಬಾವಳಿ ದಂಪತಿ ಸಸಿ ನೆಡುವ ಮೂಲಕ ಸಪ್ತಾಹಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಸಸಿ ಬೆಳೆಸುವ ಸಂಕಲ್ಪದ ಸಸಿ ನೆಡುವ ಸಪ್ತಾಹ ಅತ್ಯಂತ ಶ್ಲಾಘನೀಯವಾದುದು ಎಂದು ಹೇಳಿದರು.

ಆರ್‌ಎಸ್‌ಎಸ್‌ ದಕ್ಷಿಣ ಮಧ್ಯ ಕ್ಷೇತ್ರದ ಕ್ಷೇತ್ರ ಕಾರ್ಯವಾಹಕ ಎನ್‌. ತಿಪ್ಪೇಸ್ವಾಮಿ, ರಾಷ್ಟ್ರೋತ್ಥಾನ ಪರಿಷತ್‌ ಕಾರ್ಯದರ್ಶಿ ದಿನೇಶ್‌ ಹೆಗಡೆ, ಉಪಾಧ್ಯಕ್ಷ ದ್ವಾರಕಾನಾಥ್‌, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪುರುಷೋತ್ತಮ್‌ ಹಾಜರಿದ್ದರು.

ರಾಷ್ಟ್ರೋತ್ಥಾನ ಪರಿಷತ್‌ ವತಿಯಿಂದ ಏಳು ದಿನಗಳ ಕಾಲ ಸಪ್ತಾಹ ನಡೆಯಲಿದ್ದು, ವಿವಿಧ ಜಾತಿಯ ಆರು ಸಾವಿರ ಗಿಡಗಳನ್ನು ನೆಡುವ ಯೋಜನೆ ಹಾಕಿಕೊಳ್ಳಲಾಗಿದೆ.ಆ. 15ರವರೆಗೆ ಸಪ್ತಾಹ ನಡೆಯಲಿದೆ. ಪ್ರತಿದಿನ ಒಬ್ಬೊಬ್ಬ ಗಣ್ಯರು ಆಗಮಿಸಿ ಸಸಿ ನೆಡಲಿದ್ದಾರೆ. ಮಂಗಳವಾರ ಸಚಿವ ಎಂ.ಟಿ.ಬಿ ನಾಗರಾಜ್‌ ಸಪ್ತಾಹದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT