<p><strong>ಆನೇಕಲ್:</strong>ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ನೇಚರ್ ವಾಕ್ (ಪರಿಸರ ನಡಿಗೆ) ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಪರಿಸರ ನಡಿಗೆಯನ್ನು ಉದ್ಘಾಟಿಸಿದ ಉದ್ಯಾನದ ಉಪ ನಿರ್ದೇಶಕ ಹರೀಶ್ ಮಾತನಾಡಿ, ಪರಿಸರ ಮತ್ತು ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ಜನರಲ್ಲಿ ಪ್ರಾಣಿಗಳ ಬಗ್ಗೆ ಪ್ರೀತಿ, ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು, ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿನ ಪ್ರಾಣಿ, ಪಕ್ಷಿಗಳ ವೈವಿಧ್ಯತೆ ತಿಳಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.</p>.<p>ಪರಿಸರ ತಜ್ಞರಾದ ಕೆ.ಸಿ. ಮಹದೇಶ್, ಗೋಪಿನಾಥ್, ಸೌರವ್ ಗುಪ್ತಾ, ಮಂಜುನಾಥ್ ಓಲೇಕಾರ್, ಬಂಗಾರುಸ್ವಾಮಿ ಅವರು ಪರಿಸರ ನಡಿಗೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರಿಗೆ ಪರಿಸರದಲ್ಲಿನ ಗಿಡ, ಮರಗಳು, ಪ್ರಾಣಿ, ಪಕ್ಷಿಗಳ ಬಗ್ಗೆ ತಿಳಿಸಿಕೊಟ್ಟರು.</p>.<p>‘ಬೆಳಿಗ್ಗೆ 6.30ಕ್ಕೆ ಪ್ರಾರಂಭಗೊಂಡ ನಡಿಗೆ 9ಗಂಟೆಯವರೆಗೂ ಅರಣ್ಯದಲ್ಲಿ ನಡೆಯಿತು. ಪಾಲ್ಗೊಂಡಿದ್ದ ಸಾರ್ವಜನಿಕರು ವಿವಿಧ ವಿಚಾರಗಳ ಬಗ್ಗೆ ಮಾಹಿತಿ ಪಡೆದರು’ ಎಂದು ವಲಯ ಅರಣ್ಯಾಧಿಕಾರಿ ದಿನೇಶ್ ತಿಳಿಸಿದರು.</p>.<p>ಉದ್ಯಾನದ ಶಿಕ್ಷಣಾಧಿಕಾರಿ ಅಮಲಾ, ಆನೆ ಮೇಲ್ವಿಚಾರಕ ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong>ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವನ್ಯಜೀವಿ ಸಪ್ತಾಹದ ಅಂಗವಾಗಿ ನೇಚರ್ ವಾಕ್ (ಪರಿಸರ ನಡಿಗೆ) ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಪರಿಸರ ನಡಿಗೆಯನ್ನು ಉದ್ಘಾಟಿಸಿದ ಉದ್ಯಾನದ ಉಪ ನಿರ್ದೇಶಕ ಹರೀಶ್ ಮಾತನಾಡಿ, ಪರಿಸರ ಮತ್ತು ವನ್ಯಜೀವಿಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ಜನರಲ್ಲಿ ಪ್ರಾಣಿಗಳ ಬಗ್ಗೆ ಪ್ರೀತಿ, ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು, ತಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿನ ಪ್ರಾಣಿ, ಪಕ್ಷಿಗಳ ವೈವಿಧ್ಯತೆ ತಿಳಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು ಎಂದರು.</p>.<p>ಪರಿಸರ ತಜ್ಞರಾದ ಕೆ.ಸಿ. ಮಹದೇಶ್, ಗೋಪಿನಾಥ್, ಸೌರವ್ ಗುಪ್ತಾ, ಮಂಜುನಾಥ್ ಓಲೇಕಾರ್, ಬಂಗಾರುಸ್ವಾಮಿ ಅವರು ಪರಿಸರ ನಡಿಗೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರಿಗೆ ಪರಿಸರದಲ್ಲಿನ ಗಿಡ, ಮರಗಳು, ಪ್ರಾಣಿ, ಪಕ್ಷಿಗಳ ಬಗ್ಗೆ ತಿಳಿಸಿಕೊಟ್ಟರು.</p>.<p>‘ಬೆಳಿಗ್ಗೆ 6.30ಕ್ಕೆ ಪ್ರಾರಂಭಗೊಂಡ ನಡಿಗೆ 9ಗಂಟೆಯವರೆಗೂ ಅರಣ್ಯದಲ್ಲಿ ನಡೆಯಿತು. ಪಾಲ್ಗೊಂಡಿದ್ದ ಸಾರ್ವಜನಿಕರು ವಿವಿಧ ವಿಚಾರಗಳ ಬಗ್ಗೆ ಮಾಹಿತಿ ಪಡೆದರು’ ಎಂದು ವಲಯ ಅರಣ್ಯಾಧಿಕಾರಿ ದಿನೇಶ್ ತಿಳಿಸಿದರು.</p>.<p>ಉದ್ಯಾನದ ಶಿಕ್ಷಣಾಧಿಕಾರಿ ಅಮಲಾ, ಆನೆ ಮೇಲ್ವಿಚಾರಕ ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>