ದೇವನಹಳ್ಳಿ: ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದು, ಮಾರ್ಚ್ 12ರಂದು ಚಾಲನೆ ನೀಡಲಾಗುವುದು.