ರೋಗ ನಿಯಂತ್ರಣಕ್ಕೆ ಔಷಧ ಸಿಂಪಡಿಸಿದರೂ ಉತ್ಕೃಷ್ಟ ಹಿಪ್ಪುನೇರಳೆ ಸೊಪ್ಪು ಸಿಗದಂತಾಗಿದೆ. ಹಿಪ್ಪುನೇರಳೆ ಸೊಪ್ಪಿಗಾಗಿ ಹುಳು ಸಾಕಣೆದಾರರು 20 ಕಿ.ಮೀ ದೂರ ದ್ವಿಚಕ್ರ ವಾಹನಗಳಲ್ಲಿ ಹುಡಕಾಟ ಆರಂಭಿಸಿದ್ದಾರೆ. ಒಂದು ಎಕರೆ ರೋಗ ರಹಿತ ರೇಷ್ಮೆ ತೋಟದಲ್ಲಿ 125ರಿಂದ 150 ರೇಷ್ಮೆಮೊಟ್ಟೆ ಮೇಯಿಸಿ ಉತ್ತಮ ಇಳುವರಿಯ ರೇಷ್ಮೆಗೂಡು ಪಡೆಯಬಹುದಾಗಿದೆ. ಆದರೆ, ಸೊಪ್ಪಿನ ಚಿಗುರು ಬೆಳವಣಿಗೆ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಸತ್ವರಹಿತ ಸೊಪ್ಪು ತಿನ್ನುವ ರೇಷ್ಮೆ ಹುಳುಗಳಿಂದ ಉತ್ತಮ ಇಳುವರಿ ಪಡೆಯಲಾಗುತ್ತಿಲ್ಲ. ರೈತರಿಗೆ ಕನಿಷ್ಠ ಶೇ50ರಿಂದ 60ರಷ್ಟು ಇಳುವರಿ ಕಡಿಮೆಯಾಗಿ ನಷ್ಟ ಅನುಭವಿಸುವಂತಾಗಿದೆ ಎಂದು ರೈತ ಸಂಗಪ್ಪ ಅಳಲು ತೋಡಿಕೊಂಡರು.