ಇಲ್ಲಿನ ಹಳೇ ಕೆನರಾ ಬ್ಯಾಂಕ್ ರಸ್ತೆ, ಪದವಿ ಪೂರ್ವ ಕಾಲೇಜು ರಸ್ತೆ ರಸ್ತೆ ಸೇರಿದಂತೆ ರಸ್ತೆಗಳ ಇಕ್ಕೆಲುಗಳಲ್ಲಿ ಒಣಗಿ ಹೋಗಿದ್ದ ಮರಗಳಿಂದ ಕೊಂಬೆಗಳು ಮುರಿದು ಬೀಳುತ್ತಿದ್ದ ಪರಿಣಾಮವಾಗಿ ಜನರು ಆತಂಕದಲ್ಲೇ ಸಂಚಾರ ಮಾಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಹಲವಾರು ಬಾರಿ ಪುರಸಭೆ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ಕೊಟ್ಟಿದ್ದರೂ ಪ್ರಯೋಜನವಾಗಿರಲಿಲ್ಲ. ಈಗ ಅಧಿಕಾರಿಗಳು ಇಂಥ ಮರಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ಮಂಜುನಾಥ್ ತಿಳಿಸಿದರು.